ಇನ್ನು ಅರುಣ್ ಸಿಂಗ್ ಮತ್ತು ಯಡಿಯೂರಪ್ಪ ಅವರು ಪ್ರಾಮಾಣಿಕರು, ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುವುದಿಲ್ಲ ಎಂದಿದ್ದರು. ಆದರೆ ಏನಾಯ್ತು? ಯತ್ನಾಳ್ ಹಾಗೂ ಬೆಲ್ಲದ್ ಅವರು ಏನು ಹೇಳಿದ್ದರು? ಮತ್ತೆ ಕೆಲವರು ಪರೀಕ್ಷೆ ಪಾಸ್ ಮಾಡುವುದಾಗಿ ತಿಳಿಸಿದ್ದರು. ಹೀಗಾಗಿ ಬಿಜೆಪಿ ಯವರ ಮಾತು ನಂಬಲು ಸಾಧ್ಯವಿಲ್ಲ. ರಾಜಕಾರಣದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು ಅಂತ ಗುಡುಗಿದರು.
ಕಲಬುರ್ಗಿ: ಕುಮಾರಸ್ವಾಮಿ ಅವರು ಆರ್ಎಸ್ಎಸ್ ಬಗ್ಗೆ ಟೀಕಿಸಿರುವುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅವರು ಇತ್ತೀಚೆಗೆ ಸಾಕಷ್ಟು ಅಧ್ಯಯನ ಮಾಡುತ್ತಿದ್ದಾರೆ. ಬಹುಶಃ ತಮ್ಮ ವಿದ್ಯಾರ್ಥಿ ದಿನಗಳಲ್ಲೂ ಇಷ್ಟೊಂದು ಓದಿರಲಿಕ್ಕಿಲ್ಲ‘ ಎಂದು ವಸತಿ ಸಚಿವ ವಿ. ಸೋಮಣ್ಣ ಟೀಕಿಸಿದ್ದಾರೆ. ವಿಮಾನ ನಿಲ್ದಾಣದಿಂದ ಸಿಂದಗಿಗೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನದಲ್ಲಿ ಬರುವಾಗಲೂ ಅವರೊಂದಿಗೆ ಮಾತನಾಡಿದೆ. ನಾನು ಚಿಕ್ಕ ವಯಸ್ಸಿನಲ್ಲಿಯೇ ಆರ್ಎಸ್ಎಸ್ನೊಂದಿಗೆ ನಂಟು ಹೊಂದಿದ್ದೆ. ಅದು ರಾಷ್ಟ್ರನಿರ್ಮಾಣ ಹಾಗೂ ವ್ಯಕ್ತಿತ್ವವನ್ನು ಬೆಳೆಸುವಲ್ಲಿ ನಿರತವಾಗಿದೆಯೇ ಹೊರತು […]