ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ !

ಹುಬ್ಬಳ್ಳಿ: ಇಂದು ನಗರದಲ್ಲಿನ ಪ್ರೆಸಿಡೆಂಟ್ ಹೋಟೆಲ್ ಬಳಿಯಲ್ಲಿ ಇಂದು ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯನ್ನು  ಚಾಕುವಿನಿಂದ ಇರಿದು ಹಾಡಹಗಲೇ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಚಂದ್ರಶೇಖರ್ ಗುರೂಜಿಯನ್ನು ಅವರ ಆಪ್ತನಾಗಿದ್ದಂತ ಮಹಾಂತೇಶ್ ಎಂಬಾತನೇ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ.

ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆಯಾಗುತ್ತಿದ್ದಂತೇ, ಅತ್ತ ಅವರ ಆಪ್ತ ಮಹಾಂತೇಶ್ ಶಿರೋಳ್ ಕೂಡ ನಾಪತ್ತೆಯಾಗಿರೋದು ಹಲವು ಅನುಮಾನಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿಯೇ ಹುಬ್ಬಳ್ಳಿಯ ಗೋಕುಲ್ ರೋಡ್ ಠಾಣೆಯ ಪೊಲೀಸರು ಮಹಾಂತೇಶ್ ಅವರ ಪತ್ನಿ ವನಜಾಕ್ಷಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಅಂದಹಾಗೇ ಚಂದ್ರಶೇಖರ್ ಗುರೂಜಿ ಆಪ್ತ ಮಹಾಂತೇಶ್ ಪತ್ನಿ ವನಜಾಕ್ಷಿ ಕೂಡ ಸರಳವಾಸ್ತು ಸಂಸ್ಥೆಯ ಮಾಜಿ ಉದ್ಯೋಗಿಯಾಗಿದ್ದಾರೆ. 2019ರವರೆಗೆ ಸರಳವಾಸ್ತು ಸಂಸ್ಥೆಯಲ್ಲಿ ಕೆಲಸ ಮಾಡಿದ್ದರು ಎಂದು ತಿಳಿದು ಬಂದಿದೆ. ಹುಬ್ಬಳ್ಳಿಗೆ ಚಂದ್ರಶೇಖರ್ ಗುರೂಜಿ ಬರೋ ಮಾಹಿತಿಯನ್ನು ತಿಳಿದು ಅವರನ್ನು ಪ್ರೀ ಪ್ಲಾನ್ ಮಾಡಿ ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಇದಷ್ಟೇ ಅಲ್ಲದೇ ಬೇನಾಮಿ ಆಸ್ತಿಯ ಹಿನ್ನಲೆಯಲ್ಲಿಯೂ ಹತ್ಯೆ ನಡೆದಿರೋ ಶಂಕೆ ವ್ಯಕ್ತ ವಾಗಿದೆ. ಆಪ್ತ ಮಹಾಂತೇಶ್ ಅವರ ಪತ್ನಿ ವನಜಾಕ್ಷಿ ಹೆಸರಿನಲ್ಲಿ ಸಾಕಷ್ಟು ಆಸ್ತಿಯನ್ನು ಚಂದ್ರಶೇಖರ್ ಗುರೂಜಿ ಮಾಡಿದ್ದರು ಎನ್ನಲಾಗಿದೆ. ಆ ನಿಟ್ಟಿನಲ್ಲಿಯೂ ಇದೀಗ ಪೊಲೀಸರು ವನಜಾಕ್ಷಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಕ್ಷಿಣ ಕನ್ನಡ, ಮಂಗಳೂರು ಕೊಡಗು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ.

Tue Jul 5 , 2022
  ಮುಂಗಾರು ಪ್ರವೇಶದ ನಂತರ ನಿರಂತರ ಮಳೆಯಾಗುತ್ತಿದ್ದು, ಎಡೆಬಿಡದೆ ಭಾರೀ ಮಳೆ ಸುರಿಯುತ್ತಲೇ ಇದೆ.ಭಾರೀ ಮಳೆಗೆ ಕೇರಳ-ಕರ್ನಾಟಕ ಗಡಿ ಭಾಗ ಸಾರಡ್ಕ್​ದಲ್ಲಿ ಮಣ್ಣು ಕುಸಿತವಾಗಿ ರಸ್ತೆ ಬ್ಲಾಕ್ ಆಗಿರುವುದು.ಕೊಡಗು, ಸುಳ್ಯ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಕಂಪವೂ ಅನುಭವವಾಗಿದ್ದು ಆತಂಕಕ್ಕೆ ಕಾರಣವಾಗಿದೆಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ಸಹ ನೀಡಲಾಗಿದೆ. ಕಡಲತೀರದಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಮಲ್ಪೆಯಲ್ಲಿ ಬಲೆ ಹಾಕಲಾಗಿದೆ.ಈ ಬಾರಿ ನೈಋತ್ಯ ಮಾನ್ಸೂನ್ ಮೇ 29 […]

Advertisement

Wordpress Social Share Plugin powered by Ultimatelysocial