ಹೃದಯದಲ್ಲಿ ತೊಂದರೆ, ಜ್ವರ: ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್​ ಆಸ್ಪತ್ರೆಗೆ ದಾಖಲು

ಹೈದರಾಬಾದ್​: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಅವರಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತೀವ್ರವಾದ ಜ್ವರ, ಹಾಗೂ ಹೃದಯದಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಹೈದರಾಬಾದ್​ನ ಯಶೋದಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವೈದ್ಯರು ಆಂಜಿಯೋಗ್ರಾಂ ಪರೀಕ್ಷೆ ನಡೆಸಿದ್ದಾಗಿ ವರದಿಯಾಗಿದೆ.

ಕೆಸಿಆರ್​ ಹೃದಯದಲ್ಲಿ ಯಾವುದೇ ಬ್ಲಾಕ್​ಗಳು ಕಂಡು ಬಂದಿಲ್ಲ. ಇನ್ನು ಕೆಲವೇ ಹೊತ್ತಲ್ಲಿ ಸಿಟಿ ಸ್ಕ್ಯಾನ್​ ಮತ್ತು ಎಂಆರ್​ಐ ಸ್ಕ್ಯಾನ್​ಗಳನ್ನೂ ಮಾಡಲಾಗುವುದು ಎಂದು ವೈದ್ಯ ಎಂ.ವಿ.ರಾವ್ ಮಾಹಿತಿ ನೀಡಿದ್ದಾರೆ.

ಪ್ರತಿವರ್ಷ ಫೆಬ್ರವರಿಯಲ್ಲಿ ಚಂದ್ರಶೇಖರ್​ ರಾವ್​ ಅವರಿಗೆ ನಾವು ಎಲ್ಲ ರೀತಿಯ ಆರೋಗ್ಯ ತಪಾಸಣೆಯನ್ನೂ ಮಾಡುತ್ತೇವೆ. ಇದೀಗ ಸ್ವಲ್ಪ ಜ್ವರ, ಹೃದಯದಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆ ಮಾಡಲಾಗುತ್ತಿದೆ. ವರದಿ ಬಂದ ಬಳಿಕ ಅದನ್ನು ಆಧರಿಸಿ ಚಿಕಿತ್ಸೆ ಶುರು ಮಾಡುತ್ತೇವೆ ಎಂದು ವೈದ್ಯರು ತಿಳಿಸಿದ್ದಾರೆ. ಚಂದ್ರಶೇಖರ್​ ಅವರ ಮಗಳು ಶೋಭಾ ರಾವ್​ ಮತ್ತು ಮಗಳು ಕೆ.ಕವಿತಾ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮದುವೆ ನಿಶ್ಚಿತಾರ್ಥಕ್ಕೆ ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ಸ್ಥಳದಲ್ಲೇ ಇಬ್ಬರ ಸಾವು, ನಾಲ್ವರ ಸ್ಥಿತಿ ಗಂಭೀರ

Fri Mar 11 , 2022
  ಕೊಪ್ಪಳ: ಕನಕಗಿರಿ ತಾಲೂಕು ನವಲಿ ಗ್ರಾಮದ ರೈಸ್ ಟೆಕ್ನಾಲಜಿ ಪಾರ್ಕ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಕಾರಟಗಿ ಪಟ್ಟಣದ ಇಂದಿರಾನಗರದ ಯಮನೂರಪ್ಪ ಸಿಂಧನೂರು(55) ಮತ್ತು ತಿಪ್ಪಮ್ಮ (45) ಮೃತ ದುರ್ದೈವಿಗಳು. ಕಾರಟಗಿಯ ಯುವಕನಿಗೆ ಮದುವೆ ನಿಶ್ಚಯ ಮಾಡಲೆಂದು ಕಾರಟಗಿಯಿಂದ ಕನಕಗಿರಿಯ ಶಿರವಾರ ಗ್ರಾಮಕ್ಕೆ ಟ್ರ್ಯಾಕ್ಟರ್​ನಲ್ಲಿ 15ಕ್ಕೂ ಹೆಚ್ಚು ಮಂದಿ ತೆರಳುತ್ತಿದ್ದರು. ಮಾರ್ಗಮಧ್ಯೆ ನವಲಿಯ ರೈಸ್ ಟೆಕ್ನಾಲಜಿ ‌ಪಾರ್ಕ್ ಬಳಿ ಟ್ರ್ಯಾಕ್ಟರ್​ ಪಲ್ಟಿಯಾಗಿದ್ದು, ಇಬ್ಬರು […]

Advertisement

Wordpress Social Share Plugin powered by Ultimatelysocial