ಇತ್ತೀಚೆಗಷ್ಟೇ ಎರ್ರಗಡ್ಡಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 82 ವರ್ಷದ ಮಹಿಳೆಯೋರ್ವರ ಚಿನ್ನದ ಬಳೆಗಳನ್ನು ಆಸ್ಪತ್ರೆ ಸಿಬ್ಬಂದಿ ಕದ್ದೊಯ್ದಿದ್ದಾರೆ ಎನ್ನಲಾಗಿದೆ. ಕುಟುಂಬಸ್ಥರು ಎಸ್ಆರ್ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
ಟೈಮ್ಸ್ ಆಫ್ ಇಂಡಿಯಾ (TOI) ವರದಿಯ ಪ್ರಕಾರ, ಮೃತರು ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಆಕೆ ಮೃತಪಟ್ಟಿದ್ದಾಳೆ ಎಂದು ಸಿಬ್ಬಂದಿ ಘೋಷಿಸಿದ್ದಾರೆ. ಕುಟುಂಬಸ್ಥರು ಮೃತದೇಹವನ್ನು ಮನೆಗೆ ತಂದು ನೋಡಿದಾಗ ಚಿನ್ನದ ಬಳೆಗಳು ನಾಪತ್ತೆಯಾಗಿರುವುದು ಕಂಡು ಬಂದಿದೆ. ಎಸ್ ಆರ್ ನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಯುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: