ಮೈಸೂರು: ಶಾಸಕ ತನ್ವೀರ್ ಸೇಠ್ ಆಪ್ತ, ಕಾಂಗ್ರೆಸ್ ಮುಖಂಡ ಅಬ್ದುಲ್ ಖಾದರ್ ಶಾಹಿದ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.ಜೆಡಿಎಸ್ ಸೇರ್ಪಡೆಗೊಂಡಿರುವ ಸಿ.ಎಂ ಇಬ್ರಾಹಿಂ ಅವರನ್ನು ಸ್ವಾಗತಿಸಿದ್ದಕ್ಕೆ ಈ ಶಿಸ್ತು ಕ್ರಮ ಜರುಗಿಸಲಾಗಿದೆ.ಇವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದು, ಈ ಕುರಿತು ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಆದೇಶ ಹೊರಡಿಸಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಉಚ್ಚಾಟನೆ ಮಾಡಲಾಗಿದೆ.ಈ ಹಿಂದೆ ಕೂಡ ಇಂಥದ್ದೇ ಘಟನೆ ನಡೆದಿತ್ತು. ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗಿದರು ಎಂಬ ಕಾರಣಕ್ಕೆ ಇವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಇದೀಗ ಪಕ್ಷದಿಂದಲೇ ಉಚ್ಚಾಟನೆಗೊಳಿಸಲಾಗಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಉಚ್ಚಾಟನೆ ಮಾಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada