ಬೆಂಗಳೂರು,ಏ.14- ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇದೇ 17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರಲಿದ್ದಾರೆ.
ಕಾಂಗ್ರೆಸ್ ತೊರೆದಿರುವ ಇಬ್ರಾಹಿಂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಡಿಎಸ್ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಈಗಾಗಲೇ ಭಾಗವಹಿಸುತ್ತಿದ್ದಾರೆ.
ಪಕ್ಷಕ್ಕೆ ಸೇರ್ಪಡೆಯಾಗುವ ಇಬ್ರಾಹಿಂ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಲಾಗಿದೆ.
ಸೇರ್ಪಡೆಯಾಗುವ ಭಾನುವಾರದಂದೇ ಇಬ್ರಾಹಿಂ ರಾಜ್ಯಾಧ್ಯಕ್ಷರಾಗಿ ಅಕಾರ ಸ್ವೀಕರಿಸುವ ಸಾಧ್ಯತೆಗಳಿವೆ. ಹಾಲಿ ರಾಜ್ಯಾಧ್ಯಕ್ಷರಾಗಿರುವ ಎಚ್.ಕೆ.ಕುಮಾರಸ್ವಾಮಿ ಅವರಿಗೆ ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಉದ್ದೇಶಿಸಲಾಗಿದೆ.
ಹೀಗಾಗಿ ನೂತನ ಪದಾಕಾರಿಗಳ ಅಕಾರ ಸ್ವೀಕಾರವು ಅಂದೇ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ಜನತಾ ಜಲಧಾರೆ ಕಾರ್ಯಕ್ರಮವನ್ನು ಆರಂಭಿಸಿರುವ ಜೆಡಿಎಸ್ ಮುಂದಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಕಾರಕ್ಕೆ ಬರಬೇಕೆಂಬ ಮಹದಾಸೆ ಹೊಂದಿದೆ.
ಇದಕ್ಕೆ ಪೂರಕವಾಗಿ ಕಾರ್ಯತಂತ್ರಗಳನ್ನು ರೂಪಿಸಿ ಜನರ ಮನಸೆಳೆಯುವ ಪ್ರಯತ್ನವನ್ನು ನಿರಂತರವಾಗಿ ಮಾಡಲು ಉದೇಶಿಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada