ನಟ ಕಿಚ್ಚ ಸುದೀಪ್ ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ.

ಟ ಕಿಚ್ಚ ಸುದೀಪ್ ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಸುದೀಪ್ ಅವರು ಹೆಸರಾಂತ ನಟ.

ಸಮಾಜದ ಬಗ್ಗೆ ಕಾಳಜಿ ಇರುವಂತವರು. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ದಿಢೀರ್ ಅಂತ ಕಿಚ್ಚ ಸುದೀಪ್ ಮನೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಮೊನ್ನೆಯಷ್ಟೇ ನಟಿ ರಮ್ಯಾ ಮೂಲಕ ಸುದೀಪ್ ಅವರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎನ್ನುವ ಸುದ್ದಿಯೂ ಹರಡಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಸುದೀಪ್ ಮನೆಗೆ ಹೋಗಿರುವುದು ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿತ್ತು.

ನಾನೊಬ್ಬ ನಟ, ನನಗೆ ರಾಜಕೀಯ ಗೊತ್ತಿಲ್ಲ. ಹಾಗಾಗಿ ಆ ಕ್ಷೇತ್ರಕ್ಕೆ ಹೋಗಲಾರೆ ಎಂದು ಹಲವಾರು ಬಾರಿ ಸುದೀಪ್ ಹೇಳಿದ್ದರೂ, ಪದೇ ಪದೇ ರಾಜಕಾರಣದಲ್ಲಿ ಸುದೀಪ್ ಹೆಸರು ಕೇಳಿ ಬರುತ್ತಲೇ ಇದೆ. ಕಳೆದ ಬಾರಿ ವಿಧಾನಸಭಾ ಚುನಾವಣೆ ವೇಳೆ, ಟಿಕೆಟ್ ಘೋಷಣೆಯಷ್ಟೇ ಬಾಕಿ ಎಂದು ಸುದ್ದಿ ಹರಿದಾಡಿತು. ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆದಿಯಾಗಿ ಅನೇಕ ಗಣ್ಯರು ಸುದೀಪ್ ಅವರನ್ನು ಭೇಟಿ ಮಾಡಿದ್ದರು. ಆದರೂ, ಸುದೀಪ್ ಯಾರ ಕೈಗೂ ಸಿಗಲಿಲ್ಲ. ಇದೀಗ ಸುದೀಪ್ ಡಿಕೆಶಿ ಜೊತೆ ಕಾಣಿಸಿಕೊಂಡಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಟ ಪ್ರೇಮ್ ಭೇಟಿ ವೇಳೆ ನಿರ್ಮಾಪಕರ ಮನೆಯಲ್ಲಿ ಕಾಣಿಸಿಕೊಂಡ ನಾಗರಹಾವು!

Fri Feb 3 , 2023
ಜನಪ್ರಿಯ ನಟ ಪ್ರೇಮ್ ತಮ್ಮ ಕುಟುಂಬದೊಂದಿಗೆ ನಿರ್ಮಾಪಕರ ಮನೆಗೆ ಹೋಗಿದ್ದಾಗ ಮನೆಯ ಬಳಿ ದೊಡ್ಡ ನಾಗರಹಾವೊಂದು ಕಾಣಿಸಿಕೊಂಡು ಕ್ಷಣ ಕಾಲ ಆತಂಕದ ವಾತಾವರಣ ಉಂಟಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬಳ್ಳಿಯ ತಾಜ್ ನಗರದಲ್ಲಿರುವ ಚಲನಚಿತ್ರ ನಿರ್ಮಾಪಕ ವೆಂಕರೆಡ್ಡಿ ಅವರ ಮನೆಗೆ ನಟ ಪ್ರೇಮ್ ಹಾಗೂ ಕುಟುಂಬದವರು ಭೇಟಿ ನೀಡಿದ್ದರು. ಆಗ ಮನೆಯ ಹಿಂದಿನ ಲಕ್ಷ್ಮೀ ದೇವಸ್ಥಾನದ ಹತ್ತಿರದ ಅಂದಾಜು 6 ಅಡಿಯ ನಾಗರಹಾವು ಕಾಣಿಸಿಕೊಂಡಿತು. ಈ ವೇಳೆ ಹಾವು ಹೆಡೆಯನ್ನು […]

Advertisement

Wordpress Social Share Plugin powered by Ultimatelysocial