ಅಂಬೇಡ್ಕರ್‌ ಜೀವಂತವಾಗಿ ಇದ್ದಿದ್ದರೆ ಅವರನ್ನು ಕೊಲ್ಲುತ್ತಿದ್ದೆ:

ಹೈದರಾಬಾದ್:ಸಂವಿಧಾನ ಶಿಲ್ಫಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಹಮಾರಾ ಪ್ರಸಾದ್ ಬಂಧಿತ ವ್ಯಕ್ತಿ. ಹಮಾರಾ ಪ್ರಸಾದ್ ಅಂಬೇಡ್ಕರ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್‌ ಆದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ವಿಡಿಯೋದಲ್ಲಿ ಏನಿದೆ? : ಡಾ.ಬಿ.ಆರ್.ಅಂಬೇಡ್ಕರ್‌ ಅವರು ಬರೆದ ಪುಸ್ತಕವೊಂದನ್ನು ಹಿಡಿದುಕೊಂಡು ಹಮಾರಾ ಪ್ರಸಾದ್ ಗಾಂಧೀಜಿಯನ್ನು ಗೋಡ್ಸೆ ಕೊಂದಂತೆ, ಒಂದು ವೇಳೆ ಅಂಬೇಡ್ಕರ್‌ ಈಗ ಜೀವಂತವಾಗಿ ಇದ್ದಿದ್ದರೆ ಅವರನ್ನು ನಾನು ಕೊಲ್ಲುತ್ತಿದ್ದೆ ಎಂದು ವಿಡಿಯೋ ಮಾಡಿದ್ದಾರೆ.

ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಬಹುಜನ ಸಮಾಜವಾದಿ ಪಕ್ಷದ ತೆಲಂಗಾಣ ಮುಖ್ಯಸ್ಥ ಆರ್.ಎಸ್.ಪ್ರವೀಣ್‌ ಕುಮಾರ್‌ ಹೈದರಾಬಾದ್ ಸಿಟಿ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಬಳಿಕ ಐಪಿಸಿ ಸೆಕ್ಷನ್‌ 153 A and 505 (2) ಅಡಿಯಲ್ಲಿ ಹಮಾರಾ ಪ್ರಸಾದ್ ಎಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಾಸ್ತಿ ಮೊಬೈಲ್ ನೋಡಿದ್ದಕ್ಕೆ ಕಣ್ಣೆ ಹೋಯಿತು..!

Sat Feb 11 , 2023
ಕೆಲವೊಂದು ದುರಭ್ಯಾಸಗಳನ್ನು ಬಿಡದೇ ಇದ್ದರೆ ಅದರ ಪರಿಣಾಮ ಕೆಲವೊಮ್ಮೆ ಭಯಾನಕವಾಗಿರುತ್ತದೆ. ಈ ಕುರಿತಂತೆ ತಾಜಾ ನಿದರ್ಶನವೊಂದನ್ನು ಹೈದರಾಬಾದ್‌ನ ಡಾ. ಸುಧೀರ್ ಕುಮಾರ್, ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ತಂತ್ರಜ್ಞಾನ ಜಗತ್ತಿನ ಮೂಲೆ ಮೂಲೆ ತಲುಪಿರುವ ಈ ಡಿಜಿಟಲ್ ಯುಗದಲ್ಲಿ ಈ ಘಟನೆ ಸಾಮಾನ್ಯ ಜನರ ಕಣ್ಣು ತೆರೆಸುತ್ತದೆ. ಯುವತಿಯೊಬ್ಬಳು ಸ್ಮಾರ್ಟ್‌ಫೋನ್‌ನಿಂದ ತನ್ನ ದೃಷ್ಟಿಯನ್ನೇ ಕಳೆದುಕೊಂಡಿರುವ ಬಗ್ಗೆ ಡಾ.ಸುಧೀರ್‌ ಟ್ವೀಟ್‌ ಮಾಡಿದ್ದಾರೆ.30 ವರ್ಷದ ಮಂಜು ಅವರು ಸುಮಾರು ಒಂದೂವರೆ ವರ್ಷಗಳ ಸತತವಾಗಿ ಸ್ಮಾರ್ಟ್‌ ಫೋನ್‌ […]

Advertisement

Wordpress Social Share Plugin powered by Ultimatelysocial