ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ನಡುವೆ ಕಿತ್ತಾಟ ನಡೆಯುತ್ತಿದೆ. ದರ್ಶನ್ ಮೇಲೆ ಚಪ್ಪಲಿ ಎಸೆದ ಪ್ರಕರಣದ ಬಳಿಕ ದರ್ಶನ್ ಹಾಗೂ ಅಪ್ಪು ಫ್ಯಾನ್ಸ್ ನಡುವೆ ಫೈಟ್ ನಡೆಯುತ್ತಿದೆ.
ಈ ಪ್ರಕರಣದ ಬಳಿಕ ದರ್ಶನ್ ಫ್ಯಾನ್ಸ್ ರಾಜವಂಶದ ಕುಟುಂಬದ ವಿರುದ್ಧ ಅವ್ಯಾಚ ಶಬ್ದಗಳಿಂದ ನಿಂದಿಸುತ್ತಿದ್ದಾರೆ.
ಅಣ್ಣಾವ್ರ ಕುಟುಂಬವನ್ನು ನಿಂದಿಸುತ್ತಿದ್ದಾರೆಂದು ಅಪ್ಪು ಫ್ಯಾನ್ಸ್ ಆರೋಪ ಮಾಡುತ್ತಿದ್ದಾರೆ. ಈ ಸಂಬಂಧ ರಾಜವಂಶದ ಅಭಿಮಾನಿಗಳು ಹಾಗೂ ಕನ್ನಡಪರ ಸಂಘಟನೆಗಳು ಇಂದು (ಡಿಸೆಂಬರ್ 29) ಫಿಲ್ಮ್ ಚೇಂಬರ್ಗೆ ಮುತ್ತಿಗೆ ಹಾಕಿದ್ದರು.ಡಾ.ರಾಜ್ ಕುಟುಂಬದ ವಿರುದ್ಧ ಕೀಳು ಮಟ್ಟದ ಪದಗಳನ್ನು ಬಳಸಿ, ಕೆಟ್ಟ ಸಂದೇಶವನ್ನು ಸಾರುತ್ತಿರುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಅಲ್ಲದೆ ಮಾನನಷ್ಟ ಮೊಕದ್ದಮೆಯನ್ನೂ ದಾಖಲಿಸಲು ತೀರ್ಮಾನಿಸಲಾಗಿದೆ. ಇದೇ ವೇಳೆ ಹುಬ್ಬಳ್ಳಿಯಲ್ಲಿ ದರ್ಶನ್ ನೀಡಿದ ಹೇಳಿಕೆಗೆ ಅಪ್ಪು ಅಭಿಮಾನಿಗಳು ತಿರುಗೇಟು ನೀಡಿದ್ದಾರೆ.” ನೀವು ಎಷ್ಟೇ ನಮ್ಮ ಮೇಲೆ ಆಪಾಧನೆ ಮಾಡಿ. ನೀವು ಎಷ್ಟೇ ಸುಳ್ಳುಗಳನ್ನು ಹೇಳಿ ನಾವು ಬೇಜಾರು ಮಾಡಿಕೊಳ್ಳಲ್ಲ. ನಾವು ತಲೆ ಕೆಡಿಸಿಕೊಳ್ಳಲ್ಲ. ನಾವು ಹೆದರಿಕೊಳ್ಳೋದೂ ಇಲ್ಲ. ತಲೆ ಎತ್ತಿಕೊಂಡು ಓಡಾಡುತ್ತೇವೆ. ಯಾಕೆ ಗೊತ್ತಾ? ಅಣ್ಣಾವ್ರು ಮತ್ತು ಅಪ್ಪು ಅವರು ಅಂತಹ ಕೆಲಸ ಮಾಡಿದ್ದಾರೆ. ಅದಕ್ಕೆ ತಲೆ ಎತ್ತಿಕೊಂಡು ಓಡಾಡುತ್ತೇವೆ. ಅಪ್ಪು ಅಭಿಮಾನಿಗಳಾಗಿ ತಲೆ ತಗ್ಗಿಸುವಂತೆ ಕೆಲಸವನ್ನು ಹಿಂದೆನೂ ಮಾಡಿಲ್ಲ. ಮುಂದೆನೂ ಮಾಡಲ್ಲ. ನಮ್ ಬಾಸು ಒಳ್ಳೆಯದು ಮಾಡು ಅಂತಾನೇ ಹೇಳಿ ಹೋಗಿರೋದು. ಅದನ್ನೇ ಮಾಡುತ್ತೇವೆ. ಉರಿಸಬೇಕು ಅಂತಿದ್ರೆ, ಒಳ್ಳೆ ಕೆಲಸ ಮಾಡಿ ಉರಿಸುತ್ತಲೇ ಇರುತ್ತೇವೆ.” ಅಪ್ಪು ಬ್ರಿಗೇಡ್ ಸಂಘಟನೆಯ ಮುರಳಿ ಕಿಡಿಕಾರಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: