ಜಿಲ್ಲೆಯ ಜೇವರ್ಗಿಯಲ್ಲಿ ಮಾರ್ಚ್ 28 ರಂದು ಹಿಜಾಬ್ ಧರಿಸಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಲು ಬಾಲಕಿಗೆ ಅನುಮತಿ ನೀಡಿದ ಪ್ರೌಢಶಾಲಾ ಶಿಕ್ಷಕ ಮತ್ತು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.
ಜೇವರ್ಗಿಯ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಶ್ರೀರಾಮ ಸೇನೆ ಜೇವರ್ಗಿ ತಾಲೂಕು ಘಟಕದ ಅಧ್ಯಕ್ಷ ನಿಂಗನಗೌಡ ಮಾಲಿಪಾಟೀಲ್ ಡಿಡಿಪಿಐಗೆ ದೂರು ಸಲ್ಲಿಸಿದ್ದರು.
ದೂರಿನ ಆಧಾರದ ಮೇಲೆ ಪರೀಕ್ಷಾ ಅಧೀಕ್ಷಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಅಧೀಕ್ಷಕರ ತನಿಖಾ ವರದಿ ಆಧರಿಸಿ ಆಲೂರಿನ ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕ ಹಯಾದ್ ಬಾಗವಾನ್ ಹಾಗೂ ಕೊಡಚಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಮಂಜುನಾಥ ಅವರನ್ನು ಅಮಾನತುಗೊಳಿಸಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada