ರಾಜ್ಯದ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ `ಕಾವೇರಿ 2.0′ ತಂತ್ರಾಂಶ ಜಾರಿ .

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್.

ಅಶೋಕ್, ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಫೆಬ್ರವರಿ 2 ರಿಂದ ಮೈಸೂರು,ಮಂಗಳೂರು, ಬೆಳಗಾವಿ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಹೊಸ ಕಾವೇರಿ 2.0 ತಂತ್ರಾಂಶದಿಂದ ಕಚೇರಿಗಳಿಗೆ ಅಲೆದಾಟ ತಪ್ಪಲಿದೆ. ಸರ್ವರ್ ಸಮಸ್ಯೆಯೂ ಬಗೆಹರಿಯಲಿದೆ. ನಕಲಿ ದಾಖಲೆ ಸೃಷ್ಟಿಸಿ ಭೂಕಬಳಿಕೆಗೆ ಬ್ರೇಕ್ ಬೀಳಲಿದೆ ಎಂದು ಹೇಳಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಿಲೀಸ್‌ಗೂ ಮುನ್ನ ಕ್ರಾಂತಿ ಬಗ್ಗೆ ಸಾಲು ಸಾಲು ಪೋಸ್ಟ್ ಹಾಕ್ತಿದ್ದ ದರ್ಶನ್ ಈಗ ಫುಲ್ ಸೈಲೆಂಟ್;

Thu Feb 2 , 2023
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿ ಹರಿಕೃಷ್ಣ ಕಾಂಬಿನೇಶನ್‌ನ ಕ್ರಾಂತಿ ಚಿತ್ರ ಬಿಡುಗಡೆಯಾಗಿ ಒಂದು ವಾರ ಪೂರೈಸಿದೆ. ಹೌದು, ಕಳೆದ ಗುರುವಾರ ಗಣರಾಜ್ಯೋತ್ಸವದ ಪ್ರಯುಕ್ತ ಬಹು ನಿರೀಕ್ಷೆಯನ್ನು ಹುಟ್ಟುಹಾಕಿದ್ದ ಕ್ರಾಂತಿ ಚಿತ್ರ ಬೆಳ್ಳಿತೆರೆಗೆ ಅಪ್ಪಳಿಸಿತ್ತು. ಬರೋಬ್ಬರಿ 22 ತಿಂಗಳುಗಳ ಬಳಿಕ ಬಿಡುಗಡೆಯಾದ ತಮ್ಮ ನೆಚ್ಚಿನ ನಟನ ಚಿತ್ರವನ್ನು ಬೆಳ್ಳಿತೆರೆ ಮೇಲೆ ವೀಕ್ಷಿಸಲು ದರ್ಶನ್ ಅಭಿಮಾನಿಗಳು ಮುಗಿಬಿದ್ದಿದ್ದರು. ದೊಡ್ಡ ಮಟ್ಟದ ಕ್ರೇಜ್ ಅನ್ನು ಹುಟ್ಟುಹಾಕಿದ್ದ ಕ್ರಾಂತಿ ಚಿತ್ರ ಮುಂಗಡ ಬುಕಿಂಗ್‌ನಿಂದಲೇ 5 […]

Advertisement

Wordpress Social Share Plugin powered by Ultimatelysocial