ಇಂದು ಮಹತ್ವದ ಸಚಿವ ಸಂಪುಟ ಸಭೆ : ಪಂಚಮಸಾಲಿಗೆ 2ಎ ಮೀಸಲಾತಿ ಫೈನಲ್!

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಸಭೆಯಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದೆ. ಬೆಳಗಾವಿ ಚಳಿಗಾಲದ ಅಧಿವೇಶನ ಇಂದೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ನಿಗದಿತ ಅವಧಿಗಿಂತ ಒಂದು ದಿನ ಮೊದಲೇ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ.ಡಿ.17 ರಿಂದ ಆರಂಭವಾಗಿರುವ ಅಧಿವೇಶನ ಡಿ.30 ರವರೆಗೆ ನಿಗದಿಯಾಗಿತ್ತು, ಆದರೆ ಒಂದು ದಿನ ಮೊದಲೇ ಅಂದರೆ ನಾಳೆ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ. ಕೋವಿಡ್ ಸೋಂಕು ಉಲ್ಪಣ ಹಾಗೂ ಮಾರ್ಗಸೂಚಿ ಪಾಲನೆ ಹಿನ್ನೆಲೆ ಒಂದು ದಿನ ಮೊದಲೇ ಚಳಿಗಾಲದ ಅಧಿವೇಶನ ಸಮಾಫ್ತಿಗೊಳ್ಳಲಿದೆ ಎನ್ನಲಾಗಿದೆ. ಸದನ ಸಲಹಾ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

RRR ಸಿನಿಮಾ ನಿಜಕ್ಕೂ.ಗೇಮ್ ಆಫ್ ಥ್ರೋನ್ ನಟಿ ಎಮಾನ್ಯುಯೆಲ್ ಟೀಕಿಸಿದ್ದಾ ಅಥವಾ ಹೊಗಳಿದ್ದಾ? 4hr

Thu Dec 29 , 2022
ನವದೆಹಲಿ: ಎಸ್.ಎಸ್.ರಾಜಮೌಳಿ ಅವರ “ಆರ್ ಆರ್ ಆರ್” ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೊಳ್ಳೆ ಹೊಡೆದಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಏತನ್ಮಧ್ಯೆ ಆರ್ ಆರ್ ಆರ್ ಸಿನಿಮಾ ಆಸ್ಕರ್ ಪ್ರಶಸ್ತಿ ರೇಸ್ ನಲ್ಲಿರುವ ಸಂದರ್ಭದಲ್ಲಿ ಗೇಮ್ ಆಫ್ ಥ್ರೋನ್ಸ್ ನಟಿ ನತಾಲೈ ಎಮಾನ್ಯುಯೆಲ್ ಅಪಸ್ವರ ಎತ್ತಿದ್ದಾರೆ. “ಆರ್ ಆರ್ ಆರ್” ಅನಾರೋಗ್ಯಕರ ಸಿನಿಮಾ ಎಂದು ನತಾಲೈ ಟ್ವೀಟ್ ಮಾಡಿದ್ದು, ಬಳಿಕ ಕೂಡಲೇ ನಾನು ಆ ಶಬ್ದ(Sick)ವನ್ನು ಹೊಗಳಿಕೆಯ ಅರ್ಥದಲ್ಲಿ ಬಳಸಿರುವುದಾಗಿ ಸಮಜಾಯಿಷಿ ನೀಡಿರುವುದಾಗಿ ವರದಿ […]

Advertisement

Wordpress Social Share Plugin powered by Ultimatelysocial