ಬಿಕಾನೇರ್ (ರಾಜಸ್ಥಾನ): ಸರ್ಕಾರಿ ನೌಕರಿ ಉಳಿಸಿಕೊಳ್ಳುವ ಆಸೆಯಿಂದ ದಂಪತಿಗಳು ತನ್ನ ಐದು ತಿಂಗಳ ಹೆಣ್ಣು ಮಗುವನ್ನು ಕಾಲುವೆಗೆ ಎಸೆದು ಕೊಂದಿರುವ ಘಟನೆ ರಾಜಸ್ಥಾನದ ಬಿಕಾನೇರ್ನಲ್ಲಿ ನಡೆದಿದೆ. ಈ ಸಂಬಂಧ ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿ ತಂದೆಯನ್ನು ಜನ್ವರ್ಲಾಲ್ ಎಂದು ಗುರುತಿಸಲಾಗಿದೆ. ಜನ್ವರ್ಲಾಲ್ ಚಂದಾಸರ್ ಗ್ರಾಮದಲ್ಲಿ ಶಾಲಾ ಸಹಾಯಕರಾಗಿ ಕೆಲಸ ಮಾಡಿಕೊಂಡಿದ್ದಾರೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಜನ್ವರ್ಲಾಲ್ ಇಬ್ಬರು ಮಕ್ಕಳನ್ನು ಹೊಂದಿರುವುದಾಗಿ ಪ್ರಮಾಣ ಪತ್ರ ನೀಡಿದ್ದರು. ಪೊಲೀಸರ ಪ್ರಕಾರ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವುದರಿಂದ ಕೆಲಸ ಕಳೆದುಕೊಳ್ಳಬಹುದು ಎಂದು ಜನ್ವರ್ಲಾಲ್ ಆತಂಕೊಳಗಾಗಿದ್ದ. ಹೀಗಾಗಿ, ಕೆಲಸ ಕಳೆದುಕೊಳ್ಳಲು ಇಷ್ಟಪಡದೇ, ಜನ್ವರ್ಲಾಲ್ ತನ್ನ ಒಂದು ಹೆಣ್ಣು ಮಗುವನ್ನು ಸಾಯಿಸುವ ನಿರ್ಧಾರ ಮಾಡಿ, ಆತನ ಹೆಂಡತಿಯೊಂದಿಗೆ ಸೇರಿ ಈ ಕೃತ್ಯವೆಸಗಿದ್ದಾನೆ.
ಆರೋಪಿಗಳು ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂದ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
https://play.google.com/store/apps/details?id=com.speed.newskannada