ಭಾರತ ಟಿ20 ತಂಡಕ್ಕೆ ನೂತನ ನಾಯಕ, ಡಿಸೆಂಬರ್ 27ರಂದು ಅಧಿಕೃತ ಘೋಷಣೆ

ಬಿಸಿಸಿಐ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯಗೆ ಹೊಸ ವರ್ಷಕ್ಕೆ ಭರ್ಜರಿ ಉಡುಗೊರೆ ನೀಡಲಿದೆ. ಹಾರ್ದಿಕ್ ಪಾಂಡ್ಯ ಭಾರತ ಟಿ20 ತಂಡದ ನಾಯಕತ್ವ ವಹಿಸಿಕೊಳ್ಳಲು ಸಜ್ಜಾಗಿದ್ದು, ಡಿಸೆಂಬರ್ 27ರಂದು ಅಧಿಕೃತವಾಗಿ ಘೋಷಣೆ ಮಾಡಲಿದೆ.ವಜಾಗೊಂಡಿರುವ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿ ಮಂಗಳವಾರ ಶ್ರೀಲಂಕಾ ವಿರುದ್ಧ ಟಿ20 ಮತ್ತು ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲು ಸಿದ್ಧವಾಗಿದೆ.ರೋಹಿತ್ ಶರ್ಮಾ ಟಿ20 ನಾಯಕತ್ವದಿಂದ ಕೆಳಗಿಳಿಯಲಿದ್ದು, ಹಾರ್ದಿಕ್ ಪಾಂಡ್ಯ ಟಿ20 ತಂಡದ ನಾಯಕನಾಗಲಿದ್ದಾರೆ. 2024ರ ವರೆಗೆ ಅವರು ಭಾರತ ಟಿ20 ತಂಡವನ್ನು ಮುನ್ನಡೆಸಲಿದ್ದಾರೆ.”ಭಾರತ ಟಿ20 ತಂಡಕ್ಕೆ ಹೊಸ ನಾಯಕನಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಘೋಷಣೆ ಮಾಡುವ ಸಮಯ ಬಂದಿದೆ. ಪ್ರಸ್ತುತ ತಂಡದಲ್ಲಿರುವ ರೋಹಿತ್ ಶರ್ಮಾ ಸೇರಿದಂತೆ ಹಲವು ಆಟಗಾರರು 2024 ರವರೆಗೆ ತಂಡದಲ್ಲಿ ಇರುವ ಸಾಧ್ಯತೆ ಕಡಿಮೆ ಇದೆ. ಭಾರತೀಯ ಟಿ20 ತಂಡದ ಭವಿಷ್ಯದ ದೃಷ್ಟಿಯಿಂದ ಹಾರ್ದಿಕ್ ಪಾಂಡ್ಯ ಅವರನ್ನು ಟಿ20 ತಂಡಕ್ಕೆ ನಾಯಕರನ್ನಾಗಿ ನೇಮಿಸಲಾಗುವುದು ಎಂದು” ಬಿಸಿಸಿಐನ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.ಹಿರಿಯ ಆಟಗಾರರಿಗೆ ವಿಶ್ರಾಂತಿಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಹಿರಿಯ ಆಟಗಾರರು ವಿಶ್ರಾಂತಿ ಪಡೆಯಲಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ವಿಶ್ರಾಂತಿ ತೆಗೆದುಕೊಳ್ಳಲಿದ್ದು, ಮದುವೆಯ ಕಾರಣ ಕೆಎಲ್ ರಾಹುಲ್ ಸರಣಿಯಿಂದ ಹೊರಗುಳಿಯಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ, ಹೊಸ ವರ್ಷದ ಆಚರಣೆಗೆ ಹಲವು ರೂಲ್ಸ್‌ ಜಾರಿ

Mon Dec 26 , 2022
ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್‌ ಲೈನ್ಸ್‌ ರಿಲೀಸ್‌ ಮಾಡಿದೆ. ಇಂದು ಕೋವಿಡ್‌ ಬಗ್ಗೆ ಕುರಿತು ಸಭೆ ನಡೆಸಲಾಗಿತ್ತು ಈ ಸಭೆಯಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.ನಗರದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ.ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲಾ ಥಿಯೇಟರ್‌ ಗಳಲ್ಲೂ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಮಾಸ್ಕ್‌ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೋವಿಡ್‌ ಸಭೆ ಬಳಿಕ ಸಚಿವ ಆರ್‌ ಅಶೋಕ್‌ ಹೇಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್‌ ನಿಯಮ ಪಾಲನೆ […]

Advertisement

Wordpress Social Share Plugin powered by Ultimatelysocial