ಇನ್ನು ಈತನಿಗೆ ಭಾರತ ಟೆಸ್ಟ್ ತಂಡದಲ್ಲಿ ಉಳಿಗಾಲವಿಲ್ಲ

 

ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ 3 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿಯನ್ನು ಸುಲಭವಾಗಿಸಿಕೊಂಡಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಸರಣಿಯಲ್ಲಿ ತಂಡವನ್ನು ಮುನ್ನಡೆಸಿದ್ದರು.ಆದರೆ, ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ ಹಲವು ಆಟಗಾರರು ಕಳಪೆ ಪ್ರದರ್ಶನ ನೀಡುವ ಮೂಲಕ ಸಾಕಷ್ಟು ಟೀಕೆಗೆ ಗುರಿಯಾದರು. ಅದರಲ್ಲೂ ತಂಡದ ನಾಯಕತ್ವ ವಹಿಸಿಕೊಂಡಿದ್ದ ಕೆಎಲ್ ರಾಹುಲ್ ಬ್ಯಾಟಿಂಗ್‌ನಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ.ಕೆಎಲ್ ರಾಹುಲ್ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್, ಮುಂದಿನ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್‌ ಪ್ಲೇಯಿಂಗ್‌ XIನಲ್ಲಿ ಇರುವುದಿಲ್ಲ ಎಂದು ಹೇಳಿದ್ದಾರೆ. ಕೆಎಲ್ ರಾಹುಲ್ ಬದಲಿಗೆ ಶುಭಮನ್ ಗಿಲ್ ತಂಡದಲ್ಲಿ ಆಡಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.ಆಸ್ಟ್ರೇಲಿಯಾ ವಿರುದ್ಧ ಮುಂಬರುವ ನಾಲ್ಕು ಪಂದ್ಯಗಳ ತವರು ಟೆಸ್ಟ್ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಶುಭಮನ್ ಗಿಲ್ ಇನ್ನಿಂಗ್ಸ್ ತೆರೆಯಬಹುದು ಎಂದು ಭಾರತದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಭವಿಷ್ಯ ನುಡಿದಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ನಿಧಿ ಇದೆ ಎಂದು ಕನಸಲ್ಲಿ ಬಂದು ಹೇಳಿದ ದೇವರು!

Sun Dec 25 , 2022
    ನಿಧಿಯ ಆಸೆಯೇ ಒಂಥರ ವಿಚಿತ್ರ. ನಿಧಿಯನ್ನು ಪಡೆಯುವ ಸಲುವಾಗಿ ಮಾಟ-ಮಂತ್ರ, ತಂತ್ರಗಳಂಥ ಕೆಲಸಗಳಾಗುತ್ತವೆ. ಕೊಲೆಯಂಥ ಪ್ರಕರಣಗಳು ಕೂಡ ನಡೆದಿದ್ದೆ. ಆದರೆ ಇಲ್ಲೊಂದು ಕಡೆ ನಿಧಿ ಇದೆ ಎಂದು ಕನಸಲ್ಲಿ ದೇವರೇ ಹೇಳಿತು ಅಂತ ಒಬ್ಬ ಕಾಡಿನಲ್ಲಿ ಬಾವಿ ತೋಡಲು ಹೋದ ಘಟನೆಯೊಂದು ನಡೆದಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬೇಳೂರು ಗ್ರಾಮದ ಮೀಸಲು ಅರಣ್ಯಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ. ಕಾಡಿನಲ್ಲಿ ಬಾವಿ ತೋಡುತ್ತಿದ್ದ ಇಬ್ಬರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು […]

Advertisement

Wordpress Social Share Plugin powered by Ultimatelysocial