ಭಾರತ-ಪಾಕ್‌ ನಡುವಿನ ರೋಚಕ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ ಸ್ಪಷ್ಟನೆ…?

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಪಾಕಿಸ್ಥಾನ ಪ್ರೇರಿತ ಉಗ್ರರು ಮುಗ್ಧ ನಾಗರಿಕರ ಹತ್ಯೆಯಲ್ಲಿ ತೊಡಗಿರುವುದರಿಂದ ಭಾರತ-ಪಾಕಿಸ್ಥಾನ ನಡುವಿನ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯವನ್ನು ರದ್ದುಗೊಳಿಸಬೇಕು, ಭಾರತ ತಂಡ ಯಾವುದೇ ಕಾರಣಕ್ಕೂ ಪಾಕಿಸ್ಥಾನ ವಿರುದ್ಧ ಆಡಬಾರದು ಎಂಬ ಕೂಗು ಕೇಳಿಬರುತ್ತಿದೆ. ಆದರೆ ಈ ಪಂದ್ಯ ರದ್ದಾಗದು ಎಂದು ಬಿಸಿಸಿಐ ಸ್ಪಷ್ಟನೆ ನೀಡಿದೆ.

ಇದು ಐಸಿಸಿ ಸಂಘಟಿಸುವ ಕೂಟವಾದ್ದರಿಂದ ಪ್ರತಿಯೊಂದು ತಂಡವೂ ನಿರ್ದಿಷ್ಟ ಎದುರಾಳಿ ವಿರುದ್ಧ ಆಡಲೇಬೇಕಾಗುತ್ತದೆ. ಇದನ್ನು ನಿರಾಕರಿಸುವಂತಿಲ್ಲ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲಾ ಹೇಳಿದ್ದಾರೆ.

“ಕಾಶ್ಮೀರದಲ್ಲಿ ನಡೆಯುತ್ತಿರುವ ಮುಗ್ಧ ನಾಗರಿಕರ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಭಯೋತ್ಪಾದಕ ಸಂಘಟನೆಯ ವಿರುದ್ಧ ಸರಕಾರ ಕಠಿನ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಆದರೆ ಇದು ಐಸಿಸಿ ಆಯೋಜಿತ ಟೂರ್ನಿಯಾದ್ದರಿಂದ ಯಾವುದೇ ಪಂದ್ಯವನ್ನು ಆಡದೇ ಇರುವಂತಿಲ್ಲ. ಆ ಪ್ರಕಾರ ಭಾರತ- ಪಾಕಿಸ್ಥಾನ ನಡುವಿನ ಪಂದ್ಯ ನಿಗದಿ ಯಂತೆ ನಡೆಯಲಿದೆ’ ಎಂದು ರಾಜೀವ್‌ ಶುಕ್ಲಾ ಹೇಳಿದರು.

ಆರನೇ ಮುಖಾಮುಖಿ
ಭಾರತ-ಪಾಕಿಸ್ಥಾನ ನಡುವಿನ ಲೀಗ್‌ ಪಂದ್ಯ ರವಿವಾರ ರಾತ್ರಿ “ದುಬಾೖ ಇಂಟರ್‌ನ್ಯಾಶನಲ್‌ ಸ್ಟೇಡಿಯಂ’ನಲ್ಲಿ ನಡೆಯಲಿದೆ. ಭಾರತ-ಪಾಕಿಸ್ಥಾನ ಟಿ20 ವಿಶ್ವಕಪ್‌ನಲ್ಲಿ ಮುಖಾಮುಖಿ ಆಗುತ್ತಿರುವ 6ನೇ ನಿದರ್ಶನ ಇದಾಗಿದೆ. ಹಿಂದಿನ ಐದೂ ಪಂದ್ಯಗಳಲ್ಲಿ ಟೀಮ್‌ ಇಂಡಿಯಾ ಪಾಕಿಸ್ಥಾನವನ್ನು ಮಣ್ಣು ಮುಕ್ಕಿಸಿತ್ತು.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಲುಷಿತ ನೀರು ಮನೆಗಳಿಗೆ : ನಾಗಮಂಗಲ ಪಟ್ಟಣ, ಹೊನ್ನಾವರದಲ್ಲಿ ಜನರು ಸಂಕಷ್ಟಕೆ...?

Wed Oct 20 , 2021
ನಾಗಮಂಗಲ: ತಾಲ್ಲೂಕಿನ ಹೊನ್ನಾವರ ಗ್ರಾಮದ ಮನೆಗಳಿಗೆ ಪೂರೈಕೆ ಮಾಡುತ್ತಿರುವ ಕುಡಿಯುವ ನೀರು ಕಲುಷಿತಗೊಂಡಿದೆ. ಪೈಪ್‍ಲೈನ್ ಒಡೆದಿದ್ದು, ಚರಂಡಿ ನೀರು ಸೇರ್ಪಡೆಯಾಗಿ ಮನೆಗಳಿಗೆ ಪೂರೈಕೆಯಾಗುತ್ತಿದೆ. ಈ ನೀರು ದುರ್ವಾಸನೆ ಬೀರುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಿವೃತ್ತ ಶಿಕ್ಷಕ ಶಿವಲಿಂಗಯ್ಯ ದೂರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಿಡಿಒ ಶಿವಕುಮಾರ್, ‘ಹೊನ್ನಾವರ ಗ್ರಾಮದಲ್ಲಿ ವಿದ್ಯುತ್ ಕಂಬವನ್ನು ಬದಲಾವಣೆ ಮಾಡುವ ಸಂದರ್ಭದಲ್ಲಿ ಕುಡಿಯುವ ನೀರಿನ ಪೈಪ್‍ಲೈನ್ ಒಡೆದು […]

Advertisement

Wordpress Social Share Plugin powered by Ultimatelysocial