ಒಂದೇ ಕುಟುಂಬದ ಐದು ಮಂದಿಯನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ!

ಒಂದೇ ಕುಟುಂಬದ ಐದು ಮಂದಿಯನ್ನು ಕೊಚ್ಚಿ ಬರ್ಬರವಾಗಿಕೊಲೆ ಮಾಡಿದ ಘಟನೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ.ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಸಮೀಪದ ಬಜಾರ್ ಲೈನ್ ನಲ್ಲಿ ಈ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಕುಟುಂಬದ ಐವರನ್ನು ಕೊಲೆ ಮಾಡಲಾಗಿದೆ.ಬಜಾರ್ ಲೈನ್ ನಿವಾಸಿಗಳಾದ ಲಕ್ಷ್ಮಿ (26), ರಾಜು (12), ಕೋಮಲ್ (7), ಕುನಾಲ್ (4), ಗೋವಿಂದ (8) ಕೊಲೆಯಾದವರು.ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಎಸ್ಪಿ ಯತೀಶ್ ಸೇರಿದಂತೆ ಪೊಲೀಸರ ದೌಡಾಯಿಸಿದ್ದು, ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಕೆಆರ್‌ಎಸ್‌ನ ಗಂಗರಾಮ್ ಹಾಗೂ ಆತನ ಅಣ್ಣ ಗಣೇಶ್ ಪ್ಲಾಸ್ಟಿಕ್ ಅಲಂಕಾರಿಕ ವಸ್ತುಗಳ ವ್ಯಾಪಾರಿಗಳಾಗಿದ್ದು, ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಿಗೂ ಹೋಗಿ ವ್ಯಾಪಾರ ಮಾಡುತ್ತಾರಂತೆ. ಒಮ್ಮೆ ವ್ಯಾಪಾರಕ್ಕೆಂದು ಮನೆಯಿಂದ ಹೋದ್ರೆ ಹದಿನೈದರಿಂದ ಒಂದು ತಿಂಗಳು ವಾಪಸ್ ಬರುವುದಿಲ್ಲ.ಗಂಗರಾಜ್ ಎರಡು ದಿನದ ಹಿಂದೆ ವ್ಯಾಪಾಕ್ಕೆಂದು ಮನೆಯಿಂದ ಹೋಗಿದ್ರು. ಹೀಗಾಗಿ ಲಕ್ಷ್ಮೀ ಮಕ್ಕಳನ್ನು ನೋಡಿಕೊಂಡು ಮನೆಯಲ್ಲೇ ಇದ್ರು. ರಾತ್ರಿ ಎಲ್ಲರೂ ಮಲಗಿದ ಬಳಿಕ ಮನೆಗೆ ನುಗ್ಗಿರುವ ಹಂತಕರು ಹರಿತವಾದ ಮಾರಕಾಸ್ತ್ರಗಳಿಂದ ಐವರನ್ನು ಹತ್ಯೆ ಮಾಡಿದ್ದಾರೆ. ಬಳಿಕ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನರೇಂದ್ರ ಮೋದಿ ಫೆಬ್ರವರಿ 6 ವೇಳಾಪಟ್ಟಿ: ಗೋವಾದಲ್ಲಿ ವರ್ಚುವಲ್ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ

Sun Feb 6 , 2022
  ಪ್ರಧಾನಿ ನರೇಂದ್ರ ಮೋದಿ (ಫೋಟೋ ಕ್ರೆಡಿಟ್: ಪಿಟಿಐ ಫೈಲ್) ಪ್ರಧಾನಿ ನರೇಂದ್ರ ಮೋದಿ (ಫೋಟೋ ಕ್ರೆಡಿಟ್: ಪಿಟಿಐ ಫೈಲ್) ಪಣಜಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಗೋವಾದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಹೇಳಿದೆ. ಉತ್ತರ ಗೋವಾ ಜಿಲ್ಲೆಯ 20 ವಿಧಾನಸಭಾ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಪಕ್ಷದ ಕಾರ್ಯಕರ್ತರು ಮತ್ತು ಇತರರನ್ನು ಉದ್ದೇಶಿಸಿ ಮೋದಿ ಸಂಜೆ 4.30ಕ್ಕೆ ವಿಡಿಯೋ ಲಿಂಕ್ ಮೂಲಕ ಮಾತನಾಡಲಿದ್ದಾರೆ ಎಂದು […]

Advertisement

Wordpress Social Share Plugin powered by Ultimatelysocial