ಕುಂದಗೋಳ:
ಹೈ ವೋಲ್ಟೇಜ್ ಕ್ಷೇತ್ರವಾದ ಕುಂದಗೋಳ ಮತಕ್ಷೇತ್ರ ಕಾಂಗ್ರೆಸ್ ಶಾಸಕ ಸಿ .ಎಸ್ ಶಿವಳ್ಳಿ ನಿಧನದ ನಂತರ ಉಪಚುನಾವಣೆಯಲ್ಲಿ ಅವರ ಪತ್ನಿ ಕುಸುಮಾವತಿ ಶಿವಳ್ಳಿ ಗೆದ್ದರು. ಈ ಬಾರಿ ಕುಸುಮಾವತಿ ಶಿವಳ್ಳಿ ಹಾಗೂ ದಿ.ಸಿ.ಎಸ್ ಶಿವಳ್ಳಿ ಸಹೋದರ ಮುತ್ತಣ್ಣ ಶಿವಳ್ಳಿ ಕಾಂಗ್ರೆಸ್ ಟಿಕೆಟಗಾಗಿ ಪ್ರಯತ್ನಿಸುತ್ತಿದ್ದಾರೆ.ಮಾಜಿ ಶಾಸಕ ಗೋವಿಂದಪ್ಪ ಜುಟ್ಟಲ್ ಪುತ್ರ ಚಂದ್ರಶೇಖರ್ ಜುಟ್ಟಲ್ ಕೈ ಟಿಕೇಟ್ ಆಕಾಂಕ್ಷಿಯಾಗಿದ್ದಾರೆ.ಬಿಜೆಪಿಯಿಂದ ಮಾಜಿ ಶಾಸಕ ಎಸ್ ಐ ಚಿಕ್ಕನಗೌಡರ ಎಂ ಆರ್ ಪಾಟೀಲ್ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ. ಈ ಮಧ್ಯೆ ಆರ್ ಎಸ್ ಎಸ್ ಮೂಲದಿಂದ ರಾಜಕೀಯಕ್ಕೆ ಇಳಿದಿರುವ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾಕ್ಟರ್ ಮಲ್ಲಿಕಾರ್ಜುನ್ ಬಾಳಿಕಾಯಿ ಹೆಸರು ಕೇಳಿ ಬರುತ್ತಿದೆ. ಲಿಂಗಾಯತ ಮಾರಾಟ ಮುಸ್ಲಿಂ ಸಮುದಾಯದ ಮತಗಳು ಇಲ್ಲಿ ನಿರ್ಣಾಯಕ ಎನಿಸಿವೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…