ಚಿಕ್ಕಮಗಳೂರು: ಕಾಫಿನಾಡಲ್ಲಿ ಬೆಳಂಬೆಳಗ್ಗೆ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಿಸಾನ್ ಸೆಲ್ನ ರಾಜ್ಯಸಂಚಾಲಕ ಅಕ್ಮಲ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದಾರೆ.
ನಗರದ ಷರಿಫ್ ಗಲ್ಲಿಯಲ್ಲಿರುವ ಅಕ್ಮಲ್ ನಿವಾಸದ ಮೇಲೆ ತನಿಖಾಧಿಕಾರಿಗಳು ದಾಳಿ ನಡೆಸಿದ್ದಾರೆ. 8 ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳು, ಆಸ್ತಿ-ಪಾಸ್ತಿಗೆ ಸಂಬಂಧಿಸಿ ದಾಖಲೆಗಳ ಬಗ್ಗೆ ತೀವ್ರ ಶೋಧ ನಡೆಸುತ್ತಿದ್ದಾರೆ.
ಕೇವಲ ನಿವಾಸ ಮಾತ್ರವಲ್ಲದೇ ಅಕ್ಮಲ್ ಒಡೆತನದ ‘ಕಾಫಿ ಕ್ಯೂರಿಂಗ್’ ಸೇರಿ ವಿವಿಧ ಸ್ಥಳಗಳಲ್ಲಿಯೂ ದಾಳಿ ಮಾಡಿದ್ದಾರೆ. ಸದ್ಯ ಒಂದಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿರುವ ತನಿಖಾಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.
https://play.google.com/store/apps/details?id=com.speed.newskannada