ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆಗೆ ಆಯ್ಕೆಯಾದ ನೂತನ ಸದಸ್ಯರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಇದೇ ವೇಳೆ ಜಗ್ಗೇಶ್ ಅವರು ಕನ್ನಡದಲ್ಲಿಯೇ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಸಭೆಯಲ್ಲಿ ಕನ್ನಡದಲ್ಲಿಯೇ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದ್ದು ಎಲ್ಲರ ಗಮನ ಸೆಳೆಯಿತು.ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಜಗ್ಗೇಶ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್ಸಿಂಗ್ ಹಾಗೂ ಜೈರಾಮ್ ರಮೇಶ್ ಕೂಡ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರಿಸುವ ಮುನ್ನನಟ ಜಗ್ಗೇಶ್ ಹಾಗೂ ಅವರ ಪತ್ನಿ ಪರಿಮಳ ದೆಹಲಿಯಲ್ಲಿರುವ ರಾಯರ ಮಠಕ್ಕೆ ನಟ ಜಗ್ಗೇಶ್ ಭೇಟಿ ನೀಡಿ ಬೃಂದಾವನ ದರ್ಶನ ಮಾಡಿದ್ದಾರೆ.
ಈ ಬಳಿಕ ಟ್ವೀಟ್ ಮಾಡಿರುವ ಜಗ್ಗೇಶ್, ರಾಜ್ಯಸಭೆಯಲ್ಲಿ ಶ್ರದ್ಧೆಯಿಂದ ಕನ್ನಡದಲ್ಲಿ ರಾಯರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ನನ್ನ ಬದುಕಿನ ಶ್ರೇಷ್ಠ ಕ್ಷಣ ಎಂದು ಬರೆದುಕೊಂಡಿದ್ದಾರೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskann