ನಟ-ರಾಜಕಾರಣಿ ಜಗ್ಗೇಶ್ ಅವರು ಸಹ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆರ್ಎಸ್ಎಸ್ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸರಣಿ ಟ್ವೀಟ್ ಮಾಡುವ ಮೂಲಕ ಆರ್ಎಸ್ಎಸ್ ಅಂದ್ರೆ ಏನೆಂದು ವಿವರಿಸುವ ಪ್ರಯತ್ನ ಮಾಡಿದ್ದಾರೆ.
”ನಾನು ಕಂಡ ಅರ್ ಎಸ್ ಎಸ್ ಜಾತಿ ಧರ್ಮ ಮೀರಿದ ಮಾತೃ ಹೃದಯಿ ಸಂಘಟನೆ, ಕೊರೊನಾ ಸಂದರ್ಭವಾಗಲಿ, ನೆರೆ ಬಂದ ಸಂದರ್ಭವಾಗಲಿ ರಾಷ್ಟ್ರಕ್ಕೆ ಸಂಕಷ್ಟ ಬಂದಾಗ ಆಗಲಿ, ವಿಧ್ಯೆ ದಾನಕ್ಕಾಗಲಿ, ಅನ್ನದ ಮಾರ್ಗಕ್ಕಾಗಲಿ ಶಿಸ್ತಿನ ಸೈನ್ಯ ಇಂಥ ಸ್ವಾರ್ಥ ಜಗದಲ್ಲಿ ನಿಸ್ವಾರ್ಥ ಸೇವೆ ಮಾಡುವ ಮಾತೃ ಹೃದಯಿ ಸಂಸ್ಥೆ ಎಂದರೆ ಅದು ಒಂದೇ ಆರ್ ಎಸ್ ಎಸ್” ಎಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಚಲನಚಿತ್ರ ನಿರ್ಮಾಪಕ ಎಚ್ಡಿ ಕುಮಾರಸ್ವಾಮಿ ಆರ್ಎಸ್ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಬಗ್ಗೆ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದರು. ಇದೀಗ, ನಟ-ರಾಜಕಾರಣಿ ಜಗ್ಗೇಶ್ ರ್ಎಸ್ಎಸ್ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.