ಬೆಂಗಳೂರು ರಸ್ತೆಗುಂಡಿಗೆ ಮತ್ತೊಂದು ಬಲಿ: ಜಲ ಮಂಡಳಿ ಅಗೆದಿದ್ದ ಗುಂಡಿಗೆ ಬಿದ್ದು ಯುವಕ ಸಾವು

 

ಬೆಂಗಳೂರು: ರಸ್ತೆಗುಂಡಿಗೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಎಂಎಸ್ ಪಾಳ್ಯದ ಮುನೇಶ್ವರ ಲೇಔಟ್ ನಲ್ಲಿ ರವಿವಾರ ರಾತ್ರಿ ನಡೆದಿದೆ.

 

ಅಶ್ವಿನ್ ( 27) ಮೃತ ಯುವಕ ಎಂದು ತಿಳಿದು ಬಂದಿದೆ.

ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಶ್ವಿನ್ ರವಿವಾರ ರಾತ್ರಿ ಮುನೇಶ್ವರ ಲೇಔಟ್ ರಸ್ತೆಯಲ್ಲಿ ಬರುವಾಗ ಜಲಮಂಡಳಿ ಅಗೆದಿದ್ದ ರಸ್ತೆಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ.

ಜಲಮಂಡಳಿ ನಿರ್ಲಕ್ಷ್ಯವೇ ಘಟನೆಗೆ ಕಾರಣವೆಂದು ಸಂಬಂಧಿಕರು, ಸ್ನೇಹಿತರು ಆಕ್ರೋಶ ಹೊರ ಹಾಕಿದ್ದಾರೆ.

ಸವಾರ ಮದ್ಯಪಾನ ಮಾಡಿ ಬೈಕ್ ಚಲಾಯಿಸಿದ್ದಾರೆ ಎನ್ನಲಾಗಿದ್ದು, ಬೈಕ್ ಚಲಾಯಿಸುವ ವೇಳೆ ಹೆಲ್ಮೆಟ್ ಹಾಕಿರಲಿಲ್ಲ ಎಂದು ಸಂಚಾರಿ ಪೊಲೀಸರು ಹೇಳಿದ್ದು, ಈ ಬಗ್ಗೆ ವೈದ್ಯಕೀಯ ವರದಿ ಕೈ ಸೇರಬೇಕಿದೆ ಎಂದು ಹೇಳಿದ್ದಾರೆ.

ಯಲಹಂಕ‌ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಆರ್ಟ್ ಪಾರ್ಕ್‌ಗೆ ರಾಜ್ಯ ಸರ್ಕಾರದಿಂದ ₹ 60 ಕೋಟಿ ನೆರವು: ಅಶ್ವತ್ಥನಾರಾಯಣ

Mon Mar 14 , 2022
ಬೆಂಗಳೂರು: ‘ಗ್ರಾಮೀಣ ಪ್ರದೇಶದ ಯುವಜನರಿಗೆ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶದಿಂದ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಆವರಣದಲ್ಲಿ ‘ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಮತ್ತು ರೊಬೋಟಿಕ್ ತಂತ್ರಜ್ಞಾನ ಪಾರ್ಕ್’ ಅನ್ನು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.   ಅಶ್ವತ್ಥನಾರಾಯಣ ಅವರು ಸೋಮವಾರ ಉದ್ಘಾಟಿಸಿದರು. ಈ ವೇಳೆ ಮಾತನಾಡಿದರು ಅವರು, ‘ಕೃತಕ ಬುದ್ಧಿಮತ್ತೆ ಆಧಾರಿತ ಅರ್ಥ ವ್ಯವಸ್ಥೆಯು 2030ರ ವೇಳೆಗೆ 15.7 ಟ್ರಿಲಿಯನ್ ಡಾಲರ್ ಸಾಮರ್ಥ್ಯವುಳ್ಳದ್ದಾಗಿದ್ದು, ದೇಶದ […]

Advertisement

Wordpress Social Share Plugin powered by Ultimatelysocial