ಕಲಬುರ್ಗಿ: 2020ರ ದೋಷಪೂರಿತ ಮೀಸಲು ಸುತ್ತೋಲೆಯನ್ನು ರಾಜ್ಯ ಸರ್ಕಾರ ರದ್ದು ಪಡಿಸಲು ಕ್ರಮ ಕೈಗೊಳ್ಳಲಿದೆ. ಈ ಮೂಲಕ ಶೀಘ್ರವೇ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲಿದೆ.ಈ ಬಗ್ಗೆ ಮಾಹಿತಿ ನೀಡಿರುವಂತ ಸಾರಿಗೆ ಸಚಿವ ಬಿ.ಶ್ರೀರಾಮುಲು , ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಕಾನೂನು ಸಚಿವಾಲಯದ ಜೊತೆಗೆ ಚರ್ಚಿಸಿ, ಆದಷ್ಟು ಬೇಗ ಉದ್ಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕ ಪ್ರತಿಭಾವಂತ ಯುವಕರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದಿದ್ದಾರೆ.ಕಲ್ಯಾಣ ಕರ್ನಾಟಕ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಅಡ್ಡಿಯಾಗಿರುವಂತ 2020ರ ದೋಷಪೂರಿತ ಮೀಸಲು ಸುತ್ತೋಲೆ ರದ್ದು ಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಕಲಂ 371(ಜೆ) ಅಡಿಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ತಿಂಗಳಿನಲ್ಲಿಯೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada