ಕಲಬುರ್ಗಿ: 2020ರ ದೋಷಪೂರಿತ ಮೀಸಲು ಸುತ್ತೋಲೆಯನ್ನು ರಾಜ್ಯ ಸರ್ಕಾರ ರದ್ದು ಪಡಿಸಲು ಕ್ರಮ ಕೈಗೊಳ್ಳಲಿದೆ.

ಕಲಬುರ್ಗಿ: 2020ರ ದೋಷಪೂರಿತ ಮೀಸಲು ಸುತ್ತೋಲೆಯನ್ನು ರಾಜ್ಯ ಸರ್ಕಾರ   ರದ್ದು ಪಡಿಸಲು ಕ್ರಮ ಕೈಗೊಳ್ಳಲಿದೆ. ಈ ಮೂಲಕ ಶೀಘ್ರವೇ ಕಲ್ಯಾಣ ಕರ್ನಾಟಕದಲ್ಲಿ  ಖಾಲಿ ಇರುವಂತ ಹುದ್ದೆಗಳ ನೇಮಕಾತಿಯನ್ನು   ಮಾಡಿಕೊಳ್ಳಲಿದೆ.ಈ ಬಗ್ಗೆ ಮಾಹಿತಿ ನೀಡಿರುವಂತ ಸಾರಿಗೆ ಸಚಿವ ಬಿ.ಶ್ರೀರಾಮುಲು  , ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಕಾನೂನು ಸಚಿವಾಲಯದ ಜೊತೆಗೆ ಚರ್ಚಿಸಿ, ಆದಷ್ಟು ಬೇಗ ಉದ್ಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕ ಪ್ರತಿಭಾವಂತ ಯುವಕರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದಿದ್ದಾರೆ.ಕಲ್ಯಾಣ ಕರ್ನಾಟಕ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಅಡ್ಡಿಯಾಗಿರುವಂತ 2020ರ ದೋಷಪೂರಿತ ಮೀಸಲು ಸುತ್ತೋಲೆ ರದ್ದು ಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಕಲಂ 371(ಜೆ) ಅಡಿಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ   ತಿಂಗಳಿನಲ್ಲಿಯೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫುಟ್ ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ ಪುತ್ರ ಕ್ರಿಸ್ಟಿಯಾನೋ ರೊನಾಲ್ಡೊ ಜೂ. ತಂದೆಯ ಹೆಜ್ಜೆಗಳನ್ನು ಅನುಸರಿಸಿದ್ದು!

Sat Feb 12 , 2022
ಫುಟ್ ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ ಪುತ್ರ ಕ್ರಿಸ್ಟಿಯಾನೋ ರೊನಾಲ್ಡೊ ಜೂ. ತಂದೆಯ ಹೆಜ್ಜೆಗಳನ್ನು ಅನುಸರಿಸಿದ್ದು, ಮ್ಯಾಂಚೆಸ್ಟರ್ ಯುನೈಟೆಡ್ ಮತ್ತು ಡಾನ್ಸ್ ಗೆ ನಂ.7 ಶರ್ಟ್‌ ಧರಿಸಲಿದ್ದಾರೆ.ಕ್ರಿಸ್ಟಿಯಾನೋ ರೊನಾಲ್ಡೊ ಅವರ ಮಗ ಕ್ರಿಸ್ಟಿಯಾನೋ ಜೂನಿಯರ್ ಮ್ಯಾಂಚೆಸ್ಟರ್ ಯುನೈಟೆಡ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿರುವುದರಿಂದ ಮತ್ತು 7 ನೇ ಸಂಖ್ಯೆಯ ಶರ್ಟ್ ತೆಗೆದುಕೊಳ್ಳುವ ಮೂಲಕ ತನ್ನ ತಂದೆಯ ಹೆಜ್ಜೆ ಅನುಸರಿಸುತ್ತಿದ್ದಾರೆ.ರೊನಾಲ್ಡೊ ಅವರು ಇಂಗ್ಲೆಂಡ್, ಸ್ಪೇನ್ ಮತ್ತು ಇಟಲಿಯಲ್ಲಿ ಹಲವಾರು ಇತರ ಟ್ರೋಫಿಗಳೊಂದಿಗೆ ಐದು […]

Advertisement

Wordpress Social Share Plugin powered by Ultimatelysocial