ಜಮ್ಮು ಕಾಶ್ಮೀರದಲ್ಲಿ ಶಾಂತಿ, ಸ್ಥಿರತೆ ತರುವ ಹಾದಿಯ ಜೊತೆಗೆ ದೇಶದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ’ಭದ್ರತಾ ಪಡೆಗಳ ಕಾರ್ಯ ಶ್ಲಾಘನೀಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಭದ್ರತಾ ಪಡೆಗಳ ಬಿಗಿಯಾದ ಕ್ರಮಗಳಿಂದಾಗಿ ಕಣಿವೆ ಪ್ರದೇಶ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಪ್ರಕರಣಗಳು ಇಳಿಕೆಯಾಗಿವೆ. ಜೊತೆಗೆ ದೇಶದ ವಿವಿಧ ಭಾಗಗಳನ್ನು ಕಟ್ಟೆಚ್ಚರವಹಿಸಲಾಗಿದೆ ಎಂದು ಹೇಳಿದ್ದಾರೆ
ಮೂರು ದಿನಗಳ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಹಾವಳಿ ಕಡಿಮೆಯಾಗಿದೆ ಇದರಿಂದಾಗಿ ಸಾವು ನೋವು ಸಂಖ್ಯೆ ಇಳಿಕೆಯಾಗಿದೆ ಎಂದು ಹೇಳಿದ್ದಾರೆ.
ರಾಜ್ಯಗಳ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷರ ಸಭೆಯಲ್ಲಿ ಸೈಬರ್ ಭದ್ರತೆ, ಡ್ರಗ್ಸ್ ವಿರುದ್ಧದ ಅಭಿಯಾನ, ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿ ಕುರಿತು ಸಮ್ಮೇಳನದಲ್ಲಿ ಪ್ರಮುಖವಾಗಿ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.
ಇದರ ಜೊತೆ ಗಡಿ ನಿರ್ವಹಣೆ, ಗಡಿಯಾಚೆಗಿನ ಸವಾಲುಗಳು, ಕಡಲ ಭದ್ರತೆ, ಖಲಿಸ್ತಾನಿ ಉಗ್ರರಿಂದ ಬೆದರಿಕೆ, ಆರ್ಥಿಕತೆ, ಕ್ರಿಪ್ಟೋಕರೆನ್ಸಿ, ಮಾವೋವಾದಿ ಹಿಂಸಾಚಾರ ಮತ್ತು ಈಶಾನ್ಯ ಅಶಾಂತಿಯ ಬಗ್ಗೆಯೂ ಇಂದು ಮತ್ತೆ ನಾಳೆಯೂ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಆಂತರಿಕ ಭದ್ರತೆಯ ಭವಿಷ್ಯದ ಮಾರ್ಗಸೂಚಿಯನ್ನು ಮುಖ್ಯವಾಗಿ ಚರ್ಚಿಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.
https://play.google.com/store/apps/details?id=com.speed.newskannada