ಮೂರು ದಿನಗಳ ಹಂಪಿ ಉತ್ಸವದ ಅಂತಿಮ ದಿನವಾದ ಇಂದು ಸಂಜೆ ಹಂಪಿಯ ಉದ್ದಾನ ವೀರಭದ್ರೇಶ್ವರ ದೇವಸ್ಥಾನದಿಂದ ವಿರೂಪಾಕ್ಷ ದೇವಾಲಯದವರೆಗೆ ಸಾಗಿ ಬಂದ 60 ಕ್ಕೂ ಹೆಚ್ಚು ಜನೊದ ಕಲಾ ತಂಡಗಳ ಜನಪದ ವಾಹಿನಿ ಆಕರ್ಷಕ ಮೆರವಣಿಗೆಯೊಂದಿಗೆ ಹಂಪಿ ಉತ್ಸವದ ಸಮಾರೋಪಕ್ಕೆ ನಾಂದಿಯಾಯ್ತು.ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ತಾಯಿ ಭುವನೇಶ್ವರ ದೇವಿಗೆ ಪೂಜೆ ನೆರವೇರಿಸುವುದರ ಮೂಲಕ ಜಾನಪದ ವಾಹಿನಿ ಮೆರವಣಿಗೆಗೆ ಚಾಲನೆ ನೀಡಿದರು. ಜಾನಪದ ವಾಹಿನಿ ಕಲಾ ತಂಡಗಳ ಮೆರವಣಿಗೆ ನಾಡಿನ ಗ್ರಾಮೀಣ ಭಾಗದ ಸಾಂಸ್ಕೃತಿಕ ವೈವಿಧ್ಯತೆಗೆ ಸಾಕ್ಷಿಯಾಯಿತು.ವಿದೇಶಿ ಪ್ರವಾಸಿಗರು ಸಹ ಜಾನಪದ ಕಲೆಗಳಿಗೆ ಮನಸೋತು ವಿಡಿಯೋ, ಪೋಟೋ ತೆಗೆದುಕೊಂಡು ಸಂಭ್ರಮಿಸಿದರು. ವಿದೇಶಿ ಮಹಿಳೆ ಜನಪದ ಕಲಾವಿದರೊಂದಿಗೆ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.ದೇವಾಲಯದ ಆನೆ, ಹಂಪಿ ಸ್ಮಾರಕಗಳ ಸ್ಥಬ್ದ ಚಿತ್ರ ಮೆರವಣಿಗೆಯ ಸೊಬಗನ್ನು ಮತ್ತಷ್ಟು ಹೆಚ್ಚಿತ್ತು.
https://play.google.com/store/apps/details?id=com.speed.newskannada