ಮಾಜಿ ಸಚಿವ ಜನಾರ್ದನ ರೆಡ್ಡಿ ಸುಪುತ್ರ ಕಿರೀಟಿ ಅದ್ಧೂರಿಯಾಗಿ ಗಾಂಧಿನಗರದ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ಸೂತ್ರಧಾರ ಎಸ್.ಎಸ್.ರಾಜಮೌಳಿಯ ಅಭಯ ಹಸ್ತದಿಂದ ಕಿರೀಟಿ ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ. ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ನಟಿಸಲಿರುವ ಈ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.
ಶಿವರಾಜ್ ಕುಮಾರ್ ನಟನೆಯ ‘ಸತ್ಯ್ ಇನ್ ಲವ್’ ಸಿನಿಮಾದಲ್ಲಿ ನಟಿಸಿದ್ದ ಜೆನೀಲಿಯಾ ಮತ್ತೆ ಸ್ಯಾಂಡಲ್ವುಡ್ಗೆ ಮರಳಿದ್ದಾರೆ. ವಿವಾಹದ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದ ಜೆನೀಲಿಯಾ 14 ವರ್ಷಗಳ ಬಳಿಕ ನಟನೆಗೆ ಹಿಂದಿರುಗಿದ್ದಾರೆ.
14 ವರ್ಷಗಳ ಬಳಿಕ ಮತ್ತೆ ನಟನೆಗೆ ಮರಳುತ್ತಿದ್ದೇನೆ. ಇದು ತುಂಬಾನೇ ಸ್ಪೆಷಲ್ ಪ್ರಾಜೆಕ್ಟ್. ಈ ಸಿನಿಮಾ ಪೂರ್ತಿ ನಾವು ಇರುತ್ತೇವೆ ಎಂದು ತಿಳಿಸಿದರು. ಕಿರೀಟಿ ಸಿನಿಮಾದ ಮುಹೂರ್ತದ ವೇಳೆ ಹೀರೋ ಇಂಟ್ರೂಡಕ್ಷನ್ ಟೀಸರ್ ರಿಲೀಸ್ ಮಾಡಲಾಯಿತು. ಆಕ್ಷನ್, ಸ್ಟಂಟ್, ಡ್ಯಾನ್ಸ್, ಬೊಂಬಾಟ್ ಆಕ್ಟಿಂಗ್ ಎಲ್ಲರ ಮಿಶ್ರಣದ ಟೀಸರ್ ಝಲಕ್ ನೋಡಿ ಎಲ್ಲರೂ ಹುಬ್ಬೇರಿಸ್ತಿದ್ದಾರೆ. ಕಿರೀಟಿ ರೈಸಿಂಗ್ ಸ್ಟಾರ್ ಎಂದು ಟೀಸರ್ ನೋಡಿದವರು ಕೊಂಡಾಡ್ತಿದ್ದಾರೆ.
ಕಿರೀಟಿ ಸಿನಿಮಾ ತೆಲುಗಿನ ಖ್ಯಾತ ಪ್ರೊಡಕ್ಷನ್ ಹೌಸ್ ವಾರಾಹಿ ಫಿಲ್ಮಂ ಪ್ರೊಡಕ್ಷನ್ ನಡಿ ಅದ್ಧೂರಿ ಬಜೆಟ್ ನಲ್ಲಿ ತಯಾರಾಗ್ತಿರುವ 15ನೇ ಸಿನಿಮಾ. ‘ಮಯಾಬಜಾರ್’ ಸಿನಿಮಾ ಖ್ಯಾತಿಯ ರಾಧಾಕೃಷ್ಣರೆಡ್ಡಿ ನಿರ್ದೇಶನ, ಬಾಹುಬಲಿ ಛಾಯಾಗ್ರಾಹ ಕೆ.ಕೆ.ಸೆಂಥಿಲ್ ಕುಮಾರ್ ಕ್ಯಾಮರಾ ಕೈ ಚಳಕದಲ್ಲಿ ಸಿನಿಮಾ ಮೂಡಿಬರುತ್ತಿದೆ. ಖ್ಯಾತ ಮ್ಯೂಸಿಕ್ ಡೈರೆಕ್ಟರ್ ದೇವಿಶ್ರೀಪ್ರಸಾದ್ ಮ್ಯೂಸಿಕ್ ಇಂಪು ಇರುವ, ಭಾರತದ ಬಹುಬೇಡಿಕೆಯ ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಆಯಕ್ಷನ್ ಸೀನ್ಸ್, ಕಲಾ ನಿರ್ದೇಶನ ಮಾಡಿರುವ ರವೀಂದರ್ ಈ ಸಿನಿಮಾದ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada