ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಮುಂದಾದ ಸಿಬಿಐ!

ಜನಾರ್ದನ ರೆಡ್ಡಿಗೆ ಸೇರಿದ ಆಸ್ತಿ ಜಸ್ತಿಗೆ ಸಿಬಿಐ ಮುಂದಾಗಿದೆ.ಕರ್ನಾಟಕದ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮೊದಲ ಆರೋಪಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ. ಇದೇ ಪ್ರಕರಣದಲ್ಲಿ ಅವರು ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿದ್ದಾರೆ. ಆದರೆ ಈಗ ಸಿಬಿಐ ಮತ್ತೊಂದು ಸಂಕಷ್ಟ ತಂದಿಟ್ಟಿದೆ.ಪಕ್ಷ ಕಟ್ಟಿ ರಾಜಕೀಯ ಅಸ್ತಿತ್ವ ಸಾಬೀತುಪಡಿಸಲು ಜನಾರ್ದನ ರೆಡ್ಡಿ ಸಜ್ಜಾಗುತ್ತಿರುವಂತೆಯೇ ಇತ್ತ ಸಿಬಿಐ ಅವರಿಗೆ ಸೇರಿದ ಹೆಚ್ಚುವರಿ ಆಸ್ತಿಗಳ ಜಪ್ತಿಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಅನುಮತಿ ಕೋರಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದೆ.ಸಿಬಿಐ ಸಲ್ಲಿಸಿರುವ ಮನವಿಯನ್ನು ತುರ್ತಾಗಿ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಮನವಿ ಮಾಡಲಾಗಿದೆ. ಡಿಸೆಂಬರ್ 25ರಂದು ಹೊಸ ಪಕ್ಷ ಘೋಷಣೆ ಮಾಡಿರುವ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.ವಿಚಾರಣೆಗೆ ನಿಗದಿಯಾಗಬೇಕಿದೆಕ್ರಿಮಿನಲ್‌ ಕಾನೂನು ತಿದ್ದುಪಡಿ ಸುಗ್ರೀವಾಜ್ಞೆ 1944ರ ವಿವಿಧ ನಿಬಂಧನೆಗಳ ಅಡಿ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಜನಾರ್ದನ ರೆಡ್ಡಿ ಗಳಿಸಿರುವ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡಲು ವಿಶೇಷ ನ್ಯಾಯಾಲಯದ ಮೆಟ್ಟಿಲೇರಲು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅನುಮತಿ ಕೋರಿ 2022ರ ಆಗಸ್ಟ್‌ 30ರಂದು ಮನವಿ ಮಾಡಲಾಗಿದೆ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ವಿವರಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿವಣ್ಣನಿಗೆ ಬೆಣ್ಣೆನಗರಿಯಲ್ಲಿ ಭರ್ಜರಿ ಸ್ವಾಗತ

Fri Jan 6 , 2023
 ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ 125ನೇ ಚಿತ್ರ ‘ವೇದ’ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಶಿವ ಸಂಭ್ರಮ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಣ್ಣೆನಗರಿಗೆ ಆಗಮಿಸಿದ್ದ ಶಿವಣ್ಣ-ಗೀತಾ ಶಿವರಾಜ್‌ಕುಮಾರ್ ಹಾಗೂ ಚಿತ್ರ ತಂಡಕ್ಕೆ ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು.ನಿಟುವಳ್ಳಿಯ ದುರ್ಗಾಂಬಿಕಾ ದೇವಸ್ಥಾನಕ್ಕೆ ತಮ್ಮ ತಂಡದೊಂದಿಗೆ ಭೇಟಿ ನೀಡಿದ ಶಿವರಾಜ್‌ಕುಮಾರ್ ದೇವಿ ದರ್ಶನ ಪಡೆದರು. ಅಲ್ಲಿಂದ ತೆರೆದ ಕ್ಯಾಂಟರ್‌ನಲ್ಲಿ ಮೆರವಣಿಗೆ ನಡೆಸಲಾಯಿತು. ದಾರಿಯುದ್ದಕ್ಕೂ ಶಿವಣ್ಣ ಕೈಬೀಸಿದರು. ಪ್ರೇಕ್ಷಕರು ಶಿಳ್ಳೆ-ಕೇಕೆ ಹಾಕುತ್ತ ಸ್ವಾಗತ ನೀಡಿದರು. ಅಭಿಮಾನಿಗಳು 10-20 […]

Advertisement

Wordpress Social Share Plugin powered by Ultimatelysocial