ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೆ 8 ಆರೋಪಿಗಳ್ನು ಬಂಧಿಸಲಾಗಿದೆ.

ಶಿವಮೊಗ್ಗ: ನಗರದಲ್ಲಿನ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೆ 8 ಆರೋಪಿಗಳ್ನು ಬಂಧಿಸಲಾಗಿದೆ. ನಗರದಲ್ಲಿ ಶುಕ್ರವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಿರೋದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ   ತಿಳಿಸಿದ್ದಾರೆ.ಈ ಕುರಿತಂತೆ ತಮ್ಮ ಜಯಮಹಲ್ ನಿವಾಸದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದಂತ ಅವರು, ಹರ್ಷ ಹತ್ಯೆ ಪ್ರಕರಣದಲ್ಲಿ ಇಂದು ಮತ್ತಿಬ್ಬರು ಸೇರಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಇವರನ್ನು ಮಟ್ಟ ಹಾಕಬೇಕಿದ್ದಂತ ಪೊಲೀಸರ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ತನಿಖೆ ನಡೆಸಿ, ವರದಿ ನೀಡುವಂತೆ ಸೂಚಿಸಿರೋದಾಗಿ ತಿಳಿಸಿದರು.ಸಮಾಜಘಾತುಕ ಬೆಳವಣಿಗೆ ಕುರಿತಂತೆ ಪೊಲೀಸರ ಪಾತ್ರದ ಬಗ್ಗೆ ವರದಿ ಕೇಳಿದ್ದೇನೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಗೆ ನಿರ್ದೇಶಿಸಲಾಗಿದೆ. ಒಂದು ವಾರದಲ್ಲಿ ವರದಿ ನೀಡುವಂತೆ ನಿರ್ದೇಶಿಸಲಾಗಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಸ್ಲಾಮಾಬಾದ್‌: ಭಾರತ-ಪಾಕಿಸ್ತಾನದ ನಡುವಿನ ಭಿನ್ನಮತಗಳನ್ನು ಬಗೆಹರಿಸಲು ಟಿವಿ ಚರ್ಚೆ ನಡೆಸಲು ಹೇಳಿದ್ದಾರೆ.

Wed Feb 23 , 2022
ಇಸ್ಲಾಮಾಬಾದ್‌: ಭಾರತ-ಪಾಕಿಸ್ತಾನದ ನಡುವಿನ ಭಿನ್ನಮತಗಳನ್ನು ಬಗೆಹರಿಸಲು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ವಿಚಿತ್ರ ಮನವಿಯೊಂದನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿಟ್ಟಿದ್ದಾರೆ. ಅದೇನೆಂದರೆ ಟಿವಿ ಚರ್ಚೆ ನಡೆಸಲು ಬಯಸುವುದಾಗಿ ಅವರು ಹೇಳಿದ್ದಾರೆ.ರಷ್ಯಾಗೆ ಭೇಟಿ ನೀಡಿರುವ ಇಮ್ರಾನ್​ಖಾನ್​ ಸರ್ಕಾರಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದು, ಇದೀಗ ವೈರಲ್​ ಆಗಿದೆ. ಪಾಕಿಸ್ತಾನ ಮತ್ತು ಭಾರತದ ಮಧ್ಯೆ ಇರುವ ಭಿನ್ನಾಭಿಪ್ರಾಯಗಳನ್ನು ಚರ್ಚೆಯ ಮೂಲಕ ಬಗೆಹರಿಸಿಕೊಂಡರೆ ಅದು ನಮಗೇ ಒಳ್ಳೆಯದು. ಹೀಗಾಗಿ ನಾನು […]

Advertisement

Wordpress Social Share Plugin powered by Ultimatelysocial