ಬೆಳಗಾವಿ, ಡಿ.20- ಇಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಬೈರತಿ ಬಸವರಾಜ ಅವರ ಭೂ ಹಗರಣದ ಸದ್ದೇ ಹೆಚ್ಚಾಗಿದ್ದು, ಎಂಇಎಸ್ ಪುಂಡಾಟಿಕೆ ಸೇರಿದಂತೆ ಹಲವಾರು ವಿಷಯಗಳ ಚರ್ಚೆ ನಗಣ್ಯವಾಗಿ ಹೋಯಿತು.
ಉಭಯ ಸದನಗಳಲ್ಲೂ ಕಾಂಗ್ರೆಸ್ ಬೈರತಿ ಬಸವರಾಜ ಅವರ ಭೂ ಹಗರಣದಲ್ಲಿ ನ್ಯಾಯಾಲಯ ನೀಡಿರುವ ತೀರ್ಪಿನ ಕುರಿತು ಪ್ರಸ್ತಾಪಿಸಿ ಚರ್ಚೆಗೆ ಪಟ್ಟು ಹಿಡಿದಿತ್ತು. ಆದರೆ, ಸರ್ಕಾರ ಪ್ರಕರಣ ನ್ಯಾಯಾಲಯದಲ್ಲಿ ರುವುದರಿಂದ ನಿಯಮಾನುಸಾರ ಚರ್ಚೆಗೆ ಅವಕಾಶವಿಲ್ಲ ಎಂದು ಪ್ರತಿಪಾದಿಸಿತ್ತು.
ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಚರ್ಚೆಗೆ ಅವಕಾಶ ನಿರಾಕರಿಸಿದರು. ಗುರುವಾರದಿಂದಲೂ ಈ ಹಗ್ಗ-ಜಗ್ಗಾಟ ನಡೆಯುತ್ತಿದೆ. ಗುರುವಾರ ಇದಕ್ಕಾಗಿ ಕಲಾಪಗಳೇ ವ್ಯರ್ಥವಾಗಿಹೋಗಿತ್ತು. ಸೋಮವಾರವಾದ ಇಂದು ಕಲಾಪ ಆರಂಭದಲ್ಲಿ ಸಂತಾಪ ಸೂಚನೆ ನಡೆದಿದ್ದು ಬಿಟ್ಟರೆ ಉಭಯ ಸದನಗಳಲ್ಲೂ ಗದ್ದಲ-ಕೋಲಾಹಲವೇ ತೀವ್ರವಾಗಿತ್ತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada