ಫೆಬ್ರವರಿ.16ರಿಂದ ಪದವಿ, ಡಿಪ್ಲೋಮಾ ಕಾಲೇಜು ಪುನರಾರಂಭ;

ಬೆಂಗಳೂರು, ಫೆಬ್ರವರಿ 15: ಹಿಜಾಬ್ ಮತ್ತು ಕೇಸರಿ ವಿವಾದದ ಬಳಿಕ ಸೋಮವಾರದಿಂದ ಶಾಂತಿಯುತವಾಗಿ ಹೈಸ್ಕೂಲ್ ತರಗತಿಗಳು ಪುನರಾರಂಭಗೊಂಡಿದ್ದು, ಇದೀಗ ಬುಧವಾರದಿಂದ ಪಿಯು, ಡಿಗ್ರಿ, ವಿಶ್ವವಿದ್ಯಾಲಯ ಮತ್ತು ಡಿಪ್ಲೋಮಾ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತಂತೆ ತಾಂತ್ರಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ದಿನಾಂಕ 15-02-2022ರಲ್ಲಿ ಸೂಚಿಸಿದಂತೆ ದಿನಾಂಕ 11-02-2022ರ ಸುತ್ತೋಲೆಯನ್ನು ಮಾರ್ಪಡಿಸಿ, ದಿನಾಂಕ 16-02-2022ರಿಂದ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳ ಆರಂಭಿಸುವುದಾಗಿ ತಿಳಿಸಿದೆ.

ಈ ಮೂಲಕ ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವಂತಹ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳನ್ನು ದಿನಾಂಕ 16-02-2022 (ಬುಧವಾರ)ರಿಂದ ಪುನರ್ ಪ್ರಾರಂಭಿಸಲು ಸೂಚಿಸಿದೆ.

ಅದೇ ರೀತಿ ಉನ್ನತ ಶಿಕ್ಷಣ ಇಲಾಖೆಯೂ ಸುತ್ತೋಲೆ ಹೊರಡಿಸಿದ್ದು, ದಿನಾಂಕ 11-02-2022ರ ಸುತ್ತೋಲೆಯನ್ನು ಮಾರ್ಪಡಿಸಿ, ದಿನಾಂಕ 16-02-2022ರ ರಜೆಯನ್ನು ಈ ಕೂಡಲೇ ಜಾರಿಗೆ ಬರುವಂತೆ ರದ್ದುಪಡಿಸಿ, ಆ ದಿನದಿಂದಲೇ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳು, ಅನುದಾನಿತ ಮತ್ತು ಅನುದಾನ ರಹಿತ ಪದವಿ ಕಾಲೇಜುಗಳನ್ನು ಪುನರಾರಂಭಿಸಲು ಸೂಚಿಸಿದೆ.

ಹಿಜಾಬ್ ವಿವಾದ; ಸ್ವಾತಂತ್ರ್ಯದ ದುರ್ಬಳಕೆ ಬೇಡ
ಹಿಜಾಬ್ ವಿವಾದದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ, “ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಾಗಿರುವ ಕಡೆ ವಿದ್ಯಾರ್ಥಿಗಳು ಅದನ್ನೇ ಪಾಲಿಸಬೇಕು. ಪದವಿ ಕಾಲೇಜುಗಳಲ್ಲಿ ಸಮವಸ್ತ್ರವನ್ನೇನೂ ವಿಧಿಸಿಲ್ಲ. ಅಲ್ಲಿಗೆ ಹೋಗುವವರು ತಮ್ಮ ಇಷ್ಟದ ಉಡುಪನ್ನು ಹಾಕಿಕೊಂಡು ಹೋಗಬಹುದು. ನಮ್ಮ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವಿದೆ. ಆದರೆ, ಇದನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು. ಅದಕ್ಕೆಲ್ಲ ನಾವು ಅವಕಾಶ ಮಾಡಿಕೊಡುವುದಿಲ್ಲ,” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

“ಹಿಜಾಬ್ ವಿವಾದದ ಬಗ್ಗೆ ರಾಜ್ಯ ಹೈಕೋರ್ಟ್ ಈಗಾಗಲೇ ತನ್ನ ಮಧ್ಯಂತರ ನಿರ್ದೇಶನವನ್ನು ನೀಡಿದೆ. ಅದನ್ನು ಜಾರಿಗೊಳಿಸುವುದಷ್ಟೇ ಸರಕಾರದ ಹೊಣೆ. ಹಾಗೆಯೇ ವಿದ್ಯಾರ್ಥಿಗಳೂ ಸಹ ಶಿಕ್ಷಣದ ಕಡೆ ಗಮನ ಹರಿಸಬೇಕೇ ವಿನಃ ವಸ್ತ್ರದ ಬಗ್ಗೆಯಲ್ಲ. ಸಮವಸ್ತ್ರ ನೀತಿ 1995ರಿಂದಲೂ ಇದೆ. ಇದನ್ನೇನೂ ನಾವು ಮಾಡಿಲ್ಲ. ನಮ್ಮ ಸಮಾಜಕ್ಕೆ ಇದನ್ನೆಲ್ಲ ಮೆಟ್ಟಿ ನಿಲ್ಲುವ ಶಕ್ತಿ ಇದೆ. ಇದೇ ಪ್ರಜಾಪ್ರಭುತ್ವದ ಹೆಚ್ಚುಗಾರಿಕೆ,” ಎಂದು ಅವರು ತಿಳಿಸಿದರು.

ಈ ಕುರಿತು ಕೂ ಸಹ ಮಾಡಿರುವ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ, “ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳು ಫೆಬ್ರವರಿ 16ರಿಂದ ಪುನರಾರಂಭಗೊಳ್ಳಲಿವೆ”.

ಉಚ್ಛ ನ್ಯಾಯಾಲಯದ ಆದೇಶ ಪಾಲಿಸುವ ಜತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು ತರಗತಿಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾಚಿಕೆಗೇಡು! ಚೆನ್ನೈನಲ್ಲಿ ಮಹಿಳಾ ಸಹ-ಪ್ರಯಾಣಿಕರನ್ನು ದಿಟ್ಟಿಸುತ್ತಿರುವಾಗ ವ್ಯಕ್ತಿ ಸ್ಥಳೀಯ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಹಸ್ತಮೈಥುನ ಮಾಡಿಕೊಂಡಿದ್ದಾನೆ

Tue Feb 15 , 2022
    ಘಟನೆಯ ಬಗ್ಗೆ ಮಹಿಳೆ ಸೇಂಟ್ ಥಾಮಸ್ ಮೌಂಟ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಲಕ್ಷ್ಮಣ ಎಂದು ಗುರುತಿಸಲಾಗಿದೆ. ಚೆನ್ನೈ: ಲೈಂಗಿಕ ಕಿರುಕುಳದ ಮತ್ತೊಂದು ಘಟನೆಯಲ್ಲಿ, 23 ವರ್ಷದ ಯುವಕನೊಬ್ಬ ಸ್ಥಳೀಯ ರೈಲಿನ ಕಂಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಮುಂದೆ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಫೆಬ್ರವರಿ 9 ರಂದು ಮಹಿಳೆ ನುಂಗಂಬಾಕ್ಕಂನಿಂದ ತಾಂಬರಂಗೆ ಹೋಗುತ್ತಿದ್ದಾಗ ನಾಚಿಕೆಗೇಡಿನ ಘಟನೆ ನಡೆದಿದೆ ಎಂದು ವರದಿಯಾಗಿದೆ. ರಾತ್ರಿ 9.40ರ […]

Advertisement

Wordpress Social Share Plugin powered by Ultimatelysocial