ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಸನ್ಮಾನ್ ಹೋಟೆಲ್ ಬಾಣಸಿಗ ಮತ್ತು ಕಲಾವಿದ ಗೋಪಿಗೆ ಗೌರವ ಸಮರ್ಪಣೆ!

ಹೊನ್ನಾಂಬ ನಾಟಕ ಮಂಡಳಿ ದಂಡಿನಶಿವರ ಮತ್ತು ಯಡಿಯೂರು ಸಾಂಸ್ಕೃತಿಕ ವೇದಿಕೆ, ಮಾಯಸಂದ್ರ ಕಲಾಭಿಮಾನಿ ಬಳಗ ವತಿಯಿಂದ ಭಾನುವಾರ ಸಂಜೆ, ಬಸ್ಟಾಂಡ್ ಸನ್ಮಾನ್ ಹೋಟೆಲ್ ನ ಬಾಣಸಿಗ ಮತ್ತು ಕಲಾವಿದ ಗೋಪಿ ಅವರನ್ನು ಅಭಿನಂದಿಸಿ ಗೌರವಿಸಲಾಯಿತು.

ರಾಮಾಯಣ ಎಂಬ ಪೌರಾಣಿಕ ನಾಟಕದಲ್ಲಿ 51ನೇ ಭಾರಿ ಜಟಾಯು ಪಾತ್ರಧಾರಿಯಾಗಿ ಅಭಿನಯಿಸಿದ್ದಾರೆ.ಮತ್ತು ತುರ್ತು ಸಂದರ್ಭಗಳಲ್ಲಿ ಕುರುಕ್ಷೇತ್ರ ನಾಟಕದಲ್ಲಿ ದುಶ್ಯಾಸನ ಪಾತ್ರಧಾರಿಯಾಗಿ ಅದ್ಭುತವಾದ ಅಭಿನಯವನ್ನು ಮಾಡಿದ್ದಾರೆ. ತಮ್ಮ ಹೊಟ್ಟೆಪಾಡಿಗಾಗಿ ಬಾಣಸಿಗ ವೃತ್ತಿಯನ್ನು ಮಾಡುತ್ತಾ, ಕಲೆಯ ಬಗ್ಗೆ ಅಪಾರ ಕಾಳಜಿ ಉಳ್ಳವರಾಗಿದ್ದಾರೆ.

ಈ ಸಂದರ್ಭದಲ್ಲಿ ಸನ್ಮಾನ್ ಹೋಟೆಲ್ ನ ಮಾಲಿಕರಾದ ಸತ್ಯಾನಂದ ರಾವ್. ಡಿ.ಟಿ. ಶ್ರೀನಿವಾಸ್ ಶಿಕ್ಷಕರು. ವೇಗಣ್ಣ ಪೋಸ್ಟ್ ಮಾಸ್ಟರ್. ಸಂತೋಷ್. ಹಿರಿಯ ಮುಖಂಡರಾದ ನಂಜಪ್ಪನವರು ಸೇರಿದಂತೆ ಸನ್ಮಾನ್ ಹೋಟೆಲ್ ಎಲ್ಲಾ ಸಿಬ್ಬಂದಿಗಳು, ಗ್ರಾಮಸ್ಥರು, ಮುಂತಾದವರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸದ್ಯದಲ್ಲೇ ಬರಲಿದೆ "ಪ್ರೀತಿಯ ರಾಯಭಾರಿ" ಹುಡಗ ನಕುಲ್ ಅಭಿನಯದ ಹೊಸಚಿತ್ರ...!

Mon May 9 , 2022
ಕಳೆದ ಕೆಲವು ವರ್ಷಗಳ ಹಿಂದೆ “ಪ್ರೀತಿಯ ರಾಯಭಾರಿ” ಚಿತ್ರದ ಮೂಲಕ ಜನರ ಪ್ರೀತಿಗಳಿಸಿದ ಸುಂದರ ನಟ ನಕುಲ್. ಸದ್ಯ ನಕುಲ್ ನಾಯಕನಟರಾಗಿ ನಟಿಸಿರುವ ನೂತನ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸದ್ಯದಲ್ಲೇ ನಡೆಯಲಿದೆ. ತಮ್ಮ ಹಿಂದಿನ ಚಿತ್ರದಲ್ಲಿ ತಮ್ಮ ಸಹಜ ನಟನೆಯ ಮೂಲಕ ನಾಯಕ ನಕುಲ್ ಎಲ್ಲರ ಮನ ಗೆದ್ದಿದ್ದರು. ಈ ಚಿತ್ರ ಕೂಡ ಎಲ್ಲರ ಮೆಚ್ಚುಗೆಗೆ ಪಾತ್ರವಾಗುವಲ್ಲಿ ಯಾವುದೇ ಸಂಶಯವಿಲ್ಲ. ಮಾನ್ವಿತ ಈ […]

Advertisement

Wordpress Social Share Plugin powered by Ultimatelysocial