ನವೀನ್ ಶೇಖರಪ್ಪ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ಮಾರ್ಚ್ 21 ರಂದು ಬೆಂಗಳೂರಿಗೆ ಆಗಮಿಸಿತು. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೈದ್ಯಕೀಯ ವಿದ್ಯಾರ್ಥಿಗೆ ಅಂತಿಮ ನಮನ ಸಲ್ಲಿಸಿದರು.
ನವೀನ್ ಶೇಖರಪ್ಪ ಅವರ ಪಾರ್ಥಿವ ಶರೀರವನ್ನು ಮರಳಿ ತರಲು ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರಕ್ಕೆ ಸಿಎಂ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿದರು. ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಉಕ್ರೇನ್ನಲ್ಲಿ ಶೆಲ್ ದಾಳಿಯಲ್ಲಿ ಹುತಾತ್ಮರಾದ ನವೀನ್ ಶೇಖರಪ್ಪ ಗ್ಯಾನಗೌಡರ್ ಅವರ ಪಾರ್ಥಿವ ಶರೀರವನ್ನು ಮರಳಿ ತರಲು ಶ್ರಮಿಸಿದ ಕೇಂದ್ರ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಶೆಲ್ ದಾಳಿಯಲ್ಲಿ ನಾವು ಅವರನ್ನು ಕಳೆದುಕೊಂಡಿರುವುದು ದುರದೃಷ್ಟಕರ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada