IMRAN TAHIR:ಇಮ್ರಾನ್ ತಾಹಿರ್ ಬ್ಯಾಟಿಂಗ್ ಪರಾಕ್ರಮದ ಕಾರಣದಿಂದ ವರ್ಲ್ಡ್ ಜೈಂಟ್ಸ್ ತಂಡ ಗೆಲುವು ಸಾಧಿಸಿದೆ;

ಲೆಜೆಂಡ್ಸ್ ಲೀಗ್ ಕ್ರಿಕೆಟ್ ಪ್ರತಿದಿನವೂ ಬ್ಯಾಟಿಂಗ್ ವೈಭವಕ್ಕೆ ಸಾಕ್ಷಿಯಾಗುತ್ತಿದೆ. ಶನಿವಾರ ನಡೆದ ಇಂಡಿಯಾ ಮಹಾರಾಜಾಸ್ ಮತ್ತು ವರ್ಲ್ಡ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ರನ್ ಹೊಳೆ ಹರಿದಿದೆ. ಇಮ್ರಾನ್ ತಾಹಿರ್ ಬ್ಯಾಟಿಂಗ್ ಪರಾಕ್ರಮದ ಕಾರಣದಿಂದ ವರ್ಲ್ಡ್ ಜೈಂಟ್ಸ್ ತಂಡ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ನಡೆಸಿ ಇಂಡಿಯಾ ಮಹಾರಾಜಾಸ್ 209 ರನ್ ಗಳಿಸಿದರೆ, ವರ್ಲ್ಡ್ ಜೈಂಟ್ಸ್ ತಂಡವು ಇನ್ನೂ ಮೂರು ಎಸೆತ ಬಾಕಿ ಇರುವಂತೆ ಗುರಿ ತಲುಪಿತು.

15 ರನ್ ಗೆ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಇಂಡಿಯಾ ತಂಡಕ್ಕೆ ನಮನ್ ಓಜಾ ಮತ್ತು ನಾಯಕ ಕೈಫ್ ನೆರವಾದರು. ಇವರಿಬ್ಬರೂ ಮೂರನೇ ವಿಕೆಟ್ ಗೆ 187 ರನ್ ಗಳ ಜೊತೆಯಾಟವಾಡಿದರು. ಆಕರ್ಷಕ ಶತಕ ಬಾರಿಸಿದ ನಮನ್ ಓಜಾ ಕೇವಲ 69 ಎಸೆತಗಳಲ್ಲಿ 9 ಸಿಕ್ಸರ್ ನೆರವಿನಿಂದ 140 ರನ್ ಗಳಿಸಿದರು. ನಾಯಕ ಕೈಫ್ ಅಜೇಯ 53 ರನ್ ಗಳಿಸಿದರು.

ದೊಡ್ಡ ಗುರಿ ಬೆನ್ನತ್ತಿದ್ದ ವರ್ಲ್ಡ್ ಜೈಂಟ್ಸ್ ಗೆ ಪೀಟರ್ಸನ್ ಹೊರತುಪಡಿಸಿ ಬೇರೆ ಯಾರಿಂದಲೂ ಉತ್ತಮ ಬೆಂಬಲ ಸಿಗಲಿಲ್ಲ. ಪೀಟರ್ಸನ್ 27 ಎಸೆತಗಳಲ್ಲಿ ಆರು ಸಿಕ್ಸರ್ ನೆರವಿನಿಂದ 53 ರನ್ ಗಳಿಸಿದರು. ನಾಯಕ ಸ್ಯಾಮಿ 28 ರನ್ ಗಳಿಸಿದರು. ಆದರೆ ಕೊನೆಯಲ್ಲಿ ಸಿಡಿದು ನಿಂತ ಇಮ್ರಾನ್ ತಾಹಿರ್ ಭರ್ಜರಿ ಬ್ಯಾಟ್ ಬೀಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

POLITICS:ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ ಅಂತಾರೆ , ಸಿದ್ಧರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ.

Sun Jan 23 , 2022
ಬೆಂಗಳೂರು: ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ! ಅಂತಾರೆ. ಇದು ಭ್ರಮೆಯ ಪರಮಾವಧಿ. ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ, ಪಾಪ. ಇದು ವಿಪರೀತಕ್ಕೆ ಹೋಗಿದೆ ಎನ್ನುವುದಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಕೊಟ್ಟ ಹೇಳಿಕೆಗಳೇ ಸಾಕ್ಷಿ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಿದ್ಧರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವಂತ ಅವರು, ‘ಸ್ವಯಂ ಘೋಷಿತ ಸಂವಿಧಾನ ಪಂಡಿತ […]

Advertisement

Wordpress Social Share Plugin powered by Ultimatelysocial