ಜಮ್ಮು ಮತ್ತು ಕಾಶ್ಮೀರ, ನೋಯ್ಡಾ ಮತ್ತು NCR ನ ಇತರ ಭಾಗಗಳು ಸೇರಿದಂತೆ ಭಾರತದ ಅನೇಕ ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಆದರೆ, ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಭೂಕಂಪದಿಂದಾಗಿ ಯುಟಿಯಲ್ಲಿನ ಪರಿಸ್ಥಿತಿಯ ಬಗ್ಗೆ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಜೆ & ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಗೆ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ.
“ಅಫ್ಘಾನಿಸ್ತಾನ-ತಜಕಿಸ್ತಾನ್ ಗಡಿ ಪ್ರದೇಶದಲ್ಲಿ ಬೆಳಿಗ್ಗೆ 9:45 ಕ್ಕೆ 5.7 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು 181 ಕಿ.ಮೀ” ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ಟ್ವೀಟ್ ಮಾಡಿದೆ.
ಬೆಳಗ್ಗೆ 9.45ಕ್ಕೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನ-ತಜಕಿಸ್ತಾನ ಗಡಿಯಲ್ಲಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಬಲ ಕಂಪನದ ಅನುಭವವಾಗಿದೆ.
181 ಕಿಮೀ ಆಳದಲ್ಲಿ 36.34 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 71.05 ಡಿಗ್ರಿ ಪೂರ್ವ ರೇಖಾಂಶದಲ್ಲಿ ಭೂಕಂಪ ಸಂಭವಿಸಿದೆ.
ಈ ಕಂಪನದಿಂದಾಗಿ ಮನೆಯಿಂದ ಹೊರಗೆ ಧಾವಿಸಿದ ಜನರಲ್ಲಿ ಭೀತಿ ಉಂಟಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada