ಪತ್ನಿ-ಮಗಳ ಮೇಲೆ ಬಿಸಿ ಎಣ್ಣೆ ಎರಚಿದ್ದ ಆರೋಪಿ ಸೆರೆ

ಬೆಂಗಳೂರು, ಫೆ.3- ಪತ್ನಿ-ಮಗಳ ಮೇಲೆ ಬಿಸಿ ಎಣ್ಣೆ ಸುರಿದು ಪರಾರಿಯಾಗಿದ್ದ ಆರೋಪಿಯನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎಲ್‍ಆರ್ ನಗರದ ನಿವಾಸಿ ಥಾಮಸ್(46) ಬಂಧಿತ ಆರೋಪಿ.ಈತನ ಪತ್ನಿ ಮನೆ ಕೆಲಸ ಮಾಡಿ, ಕಟುಂಬ ನಿರ್ವಹಿಸುತ್ತಾರೆ. ಕುಡಿತದ ಚಟ ಹೊಂದಿದ್ದ ಆರೋಪಿ ವಿನಾ ಕಾರಣ ಪತ್ನಿ ಮಗಳೊಂದಿಗೆ ಜಗಳವಾಡುತ್ತಿದ್ದನು.ಭಿನ್ನಾಭಿಪ್ರಾಯದಿಂದಾಗಿ ದಂಪತಿ ನಡುವೆ ಜಗಳವಾಗುತ್ತಿತ್ತು. ಜ.30ರಂದು ಆರೋಪಿ ಹೊರಗೆ ಹೋಗಿ ಅಡುಗೆ ಎಣ್ಣೆ ತೆಗೆದುಕೊಂಡು ಮನೆಗೆ ಬಂದಿದ್ದಾನೆ. ಈ ಸಂದರ್ಭದಲ್ಲಿ ಪತ್ನಿ-ಮಗಳು ಟಿವಿ ನೋಡುತ್ತಾ ಕುಳಿತ್ತಿದ್ದರು. ಆರೋಪಿ ಸೀದಾ ಅಡುಗೆ ಮನೆಗೆ ಹೋಗಿ ಎಣ್ಣೆ ಕಾಯಿಸಿಕೊಂಡು ಬಂದು ಪತ್ನಿ-ಮಗಳ ಮೇಲೆ ಚೆಲ್ಲಿ ಸ್ಥಳದಿಂದ ಪರಾರಿಯಾಗಿದ್ದನು.ವಿಷಯ ತಿಳಿದು ಆಡುಗೋಡಿ ಠಾಣೆ ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲಿಸಿ ಸುಟ್ಟ ಗಾಯಗೊಂಡಿದ್ದ ತಾಯಿ-ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೆಹಲಿಯಲ್ಲಿ ಗೀಸರ್‌ನಿಂದ ವಿಷಕಾರಿ ಅನಿಲವನ್ನು ಸೇವಿಸಿ 13 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ

Thu Feb 3 , 2022
ದುರಂತ ಘಟನೆಯೊಂದರಲ್ಲಿ, ಜನವರಿ 31 ರಂದು ದೆಹಲಿಯ ದ್ವಾರಕಾ ಪ್ರದೇಶದ ಸೆಕ್ಟರ್ 18A ನಲ್ಲಿರುವ ತನ್ನ ಮನೆಯ ಸ್ನಾನಗೃಹದಲ್ಲಿ 13 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಳು. ಉಸಿರುಗಟ್ಟುವಿಕೆಯಿಂದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಲಾಗಿದೆ ಕಾರ್ಬನ್ ಮಾನಾಕ್ಸೈಡ್ ಅನಿಲದ ಸೋರಿಕೆ ಅವಳ ಬಾತ್ರೂಮ್ನಲ್ಲಿರುವ ಗೀಸರ್ನಿಂದ. ಉಸಿರುಗಟ್ಟುವಿಕೆಯಿಂದ ಸಾವು ಇಂಡಿಯನ್ ಎಕ್ಸ್‌ಪ್ರೆಸ್ (ಐಇ) ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಜನವರಿ 31 ರಂದು 7 ನೇ ತರಗತಿಯ ವಿದ್ಯಾರ್ಥಿನಿ ತನ್ನ ಮನೆಯ ಸ್ನಾನಗೃಹದಲ್ಲಿ […]

Advertisement

Wordpress Social Share Plugin powered by Ultimatelysocial