ಚುನಾವಣೆ ವೇಳೆ ಈ ರೀತಿಯ ಗಿಮಿಕ್ ಕಾಂಗ್ರೆಸ್ ಗೆ ರಕ್ತಗತ
ಪಿಎಸ್ ಐ ಹಗರಣ ಕಂಡು ಹಿಡಿದಿದ್ದೇ ಗೃಹ ಸಚಿವರು ಕಾಂಗ್ರೆಸ್ ಗೃಹಸಚಿವರನ್ನು ಅಭಿನಂದಿಸಬೇಕಿತ್ತು
ಏಕಾಏಕಿ ಈಗ ಪ್ರಕರಣದಲ್ಲಿ ಉತ್ತರ ಕರ್ನಾಟಕದಲ್ಲಿ ಓಡಾಡ್ತಿದ್ದುದನ್ನು ಬೆಂಗಳೂರಿಗೆ ತಂದು ಅಶ್ವಥ್ ನಾರಾಯಣ್ ಮೇಲೆ ಅರೋಪ ಮಾಡಿದ್ದಾರೆ
ಯಾವುದೇ ದಾಖಲೆ ಇಲ್ಲದೇ ಸುಳ್ಳು ಆರೋಪ ಮಾಡಿದ್ದಾರೆ.ಹಿಂದೆ ಬಿಟ್ ಕಾಯಿನ್ ನಲ್ಲೂ ಹೀಗೆ ಆರೋಪ ಮಾಡಿ ಝೀರೋ ಆಯ್ತು
ಕಾಂಗ್ರೆಸ್ ಸಂತೆ ಭಾಷಣ ಬಿಟ್ಟು ದಾಖಲೆ ಇದ್ದರೆ ಕೊಡಲಿ ಚುನಾವಣಾ ಗಿಮಿಕ್ ಮಾಡಲು ಅವರಿಗೆ ಇನ್ನೂ ಸಮಯ ಇದೆ
ನಿಮ್ಮ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿರುವಾಗ ಬಿಜೆಪಿ ತಟ್ಟೆಯಲ್ಲಿ ನೊಣ ಬಿದ್ದಿದೆ ಅಂತಾ ಹೇಳಲು ಬರಬೇಡಿ
ಡಬಲ್ ಇಂಜಿನ್ ಭಯದಿಂದ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ ಸಿಎಂ ಆಗುವುದು ಎಲ್ಲಾ ಪಾರ್ಟಿ ತೀರ್ಮಾನ ಮಾಡುತ್ತದೆ
ಅಶ್ವಥ್ ನಾರಾಯಣ ಎಲ್ಲೂ ನಾನು ಸಿಎಂ ಆಗ್ತೀನಿ ಅಂತ ಹೇಳಿಲ್ಲ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಅಶ್ವಥ್ ನಾರಾಯಣ ಉಲ್ಲೇಖ ಮಾಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada