ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿರುವ ಕರ್ನಾಟಕ ನೀರಾವರಿ ನಿಗಮದ ಘಟಪ್ರಭಾ ಎಡದಂಡೆ ಕಾಲುವೆಯ ಕಛೇರಿಗೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ಹಾಗೂ ಅವರ ಸಿಬ್ಬಂದಿ ಬೆಳ್ಳಿಗೆ ಹನ್ನೊಂದು ಗಂಟೆ ಕಳೆದರೂ ತಮ್ಮ ಕರ್ತವ್ಯಕ್ಕೆ ಹಾಜರಾಗಿಲ್ಲ ಇದರಿಂದಾಗಿ ರೈತರಿಗೆ ಅತೀವ ತೊಂದರೆ ಆಗುತ್ತಿದೆ.ಈ ಬಗ್ಗೆ ಸಾಮಾಜಿಕ ಹೋರಾಟಗಾರರಾದ ಓಂ ಕಾರ ಮಾತನಾಡಿ ನೀರಾವರಿ ಇಲಾಖೆಯ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬಾರದೆ ತಮ್ಮ ಕರ್ತವ್ಯ ಲೋಪವನ್ನು ಎಸಗುತ್ತಿದ್ದಾರೆ ಅಧಿಕಾರಿಗಳ ಈ ನಡೆಯಿಂದಾಗಿ ರೈತರಿಗೆ ಬಹಳ ತೊಂದರೆ ಆಗುತ್ತಿದೆ ಈ ಬಗ್ಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಹಾಗೂ ಮೇಲಧಿಕಾರಿಗಳು ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
https://play.google.com/store/apps/details?id=com.speed.newskannada