ನವದೆಹಲಿ: ಎರಡು ವರ್ಷಗಳ ಹಿಂದೆ ಭಯೋತ್ಪಾದನೆ ಆರೋಪದ ಮೇಲೆ ಉತ್ತರ ಪ್ರದೇಶದಲ್ಲಿ ಬಂಧಿತರಾಗಿದ್ದ ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರನ್ನು ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
2020 ರ ಅಕ್ಟೋಬರ್ನಲ್ಲಿ ಹತ್ರಾಸ್ಗೆ ತೆರಳುತ್ತಿದ್ದಾಗ ಸಿದ್ದಿಕ್ ಕಪ್ಪನ್ ಅವರನ್ನು ಬಂಧಿಸಲಾಯಿತು.
ಅಲ್ಲಿ ಸಿದ್ದಿಕಿ 20 ವರ್ಷದ ಪರಿಶಿಷ್ಟ ಜಾತಿಯ ಹುಡುಗಿಯ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ಬಗ್ಗೆ ವರದಿ ಮಾಡಲು ಹತ್ರಾಸ್ಗೆ ತೆರಳುತ್ತಿದ್ದರು. ಈ ವೇಳೆ ಅಶಾಂತಿ ಸೃಷ್ಟಿಸಲು ಹೋಗುತ್ತಿದ್ದಾರೆ ಎಂದು ಪೊಲೀಸರು ಅನುಮಾನಿಸಿ ಸಿದ್ದಿಕಿಯನ್ನು ಬಂಧಿಸಿದ್ದರು.
ಸಿದ್ದಿಕಿಮೇಲೆ ದೇಶದ್ರೋಹದ ಆರೋಪ ಹೊರಿಸಲಾಯಿತು ಮತ್ತು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಯಿತು. ಫೆಬ್ರವರಿ 2022 ರಲ್ಲಿ, ನಿಷೇಧಿತ ಪೀಪಲ್ಸ್ ಫ್ರಂಟ್ ಆಫ್ ಇಂಡಿಯಾದಿಂದ ಹಣವನ್ನು ಸ್ವೀಕರಿಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada