ಜಗದ್ಗುರುಗಳ ಭೇಟಿಗೆ ಜೆಪಿ ನಡ್ಡಾ 20 ನಿಮಿಷಗಳ ಕಾಲಾವಕಾಶ ಕೋರಿದ್ದಾರೆ.

ಬೆಂಗಳೂರು : ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬಿಜೆಪಿ ಹೈಕಮಾಂಡ್ ನಾಯಕರು ಹೆಚ್ಚು ಭೇಟಿ ನೀಡುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಫೆ.20 ರಂದು ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ.
ಫೆ.20 ರಂದು ರಾತ್ರಿ ಶೃಂಗೇರಿಯಲ್ಲಿ ತಂಗಲಿರುವ ಜೆಪಿ ನಡ್ಡಾ, ಶಾರದಾಂಬೆಯ ದರ್ಶನದ ಬಳಿಕ ಜಗದ್ಗುರುಗಳನ್ನು ಭೇಟಿ ಮಾಡಲಿದ್ದಾರೆ.

ಜಗದ್ಗುರುಗಳ ಭೇಟಿಗೆ ಜೆಪಿ ನಡ್ಡಾ 20 ನಿಮಿಷಗಳ ಕಾಲಾವಕಾಶ ಕೋರಿದ್ದಾರೆ. ಶೃಂಗೇರಿ ಮಠದ ಮೇಲೆ ದಾಳಿ ಮಾಡಿದ ಪೇಶ್ವೆ ಸಮುದಾಯಕ್ಕೆ ಸಂಬಂಧಪಟ್ಟವರನ್ನು ಬಿಜೆಪಿ ರಾಜ್ಯದಲ್ಲಿ ಸಿಎಂ ಮಾಡಲು ಹೊರಟಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಜೆಪಿ ನಡ್ಡಾ ಶೃಂಗೇರಿಗೆ ಭೇಟಿ ನೀಡಿ ಜಗದ್ಗುರುಗಳೊಂದಿಗೆ ಮಾತನಾಡಲು ಮುಂದಾಗಿರುವುದು ಕುತೂಹಲ ಮೂಡಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅವನ ಮಾತಿಗೆ ನಾನು ಉತ್ತರ ಕೊಡಲ್ಲ.

Thu Feb 16 , 2023
ಮೈಸೂರು: ಬಚ್ಚಲು ಬಾಯಿಗೆ ಉತ್ತರ ಕೊಡುವಷ್ಟು ಮಟ್ಟಿಗೆ ನಾನು ಕೆಳ ಮಟ್ಟಕ್ಕೆ ಇಳಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಕಿಡಿ ಕಾರಿದ್ದಾರೆ. ನಗರದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟಿರುವ ಅಸ್ವತ್ಥನಾರಾಯಣ ವಿರುದ್ಧ ಕೆಂಡವಾದರು. ಅವನ ಮಾತಿಗೆ ನಾನು ಉತ್ತರ ಕೊಡಲ್ಲ. ಇದಕ್ಕೆ ಸಿಎಂ ಬೊಮ್ಮಾಯಿ ಮತ್ತು ಯಡಿಯೂರಪ್ಪ ಅವರೆ ಉತ್ತರ ಕೊಡಬೇಕು ಅಂತ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಸುದೀಪ್ ನನ್ನ […]

Advertisement

Wordpress Social Share Plugin powered by Ultimatelysocial