‘ಜುಗಲ್ ಬಂದಿ’ ಸಿನಿಮಾದ ಮೊದಲ ಹಾಡು ಬಿಡುಗಡೆ…ಮನ ಮುಟ್ಟುತ್ತಿದೆ ದಿವಾಕರ್ ಸಾಹಿತ್ಯದ ‘ಇಂಥವರ ಸಂತಾನ ಭಾಗ್ಯ’ ಹಾಡು

ದಿವಾಕರ್ ಡಿಂಡಿಮ ಆಕ್ಷನ್ ಕಟ್ ಹೇಳಿ ನಿರ್ಮಾಣ ಮಾಡ್ತಿರುವ ಜುಗಲ್ ಬಂದಿ ಸಿನಿಮಾ ಒಂದಲ್ಲ ಒಂದು ವಿಚಾರಕ್ಕೆ ಸದ್ದು ಸುದ್ದಿ ಮಾಡುತ್ತಿದೆ. ರಿಲೀಸ್ ಗೂ ಮೊದಲೇ ಭಾರೀ ಮೊತ್ತಕ್ಕೆ ಆಡಿಯೋ ಹಕ್ಕುಗಳನ್ನು ಮಾರಾಟ ಮಾಡಿ ಗಮನಸೆಳೆದಿದ್ದ ಜುಗಲ್ ಬಂದಿ ಸಿನಿಮಾ ಅಂಗಳದಿಂದ ಮನಮುಟ್ಟುವ ಮೊದಲ ಹಾಡು ಬಿಡುಗಡೆಯಾಗಿದ್ದು, ಸಂಗೀತ ಪ್ರಿಯರ ಮೆಚ್ಚುಗೆ ಪಡೆದುಕೊಂಡಿದೆ.

ಇಂಥವರ ಸಂತಾನ ಭಾಗ್ಯ ಎಂದು ಶುರುವಾಗುವ ಅದ್ಭುತ ಸಾಹಿತ್ಯ ಎಂತಹ ಕಲ್ಲು ಮನಸನ್ನು ಕರಿಸುವಂತಿದೆ. ನಿರ್ದೇಶಕ ದಿವಾಕರ್ ಅವರು ಪೊಣಿಸಿರುವ ಅರ್ಥಪೂರ್ಣ ಸಾಲುಗಳಿಗೆ ಪ್ರದ್ಯೋತನ್ ಸಂಗೀತದ ಕಿಕ್.. ಮಾನಸಿ ಸುಧೀರ್ ಅವರ ಅಭಿನಯದ ಮ್ಯಾಜಿಕ್.. ಎಸ್ ಕೆ ರಾವ್ ಕ್ಯಾಮೆರಾ ವರ್ಕ್.. ಡಾ.ವೈಕಂ ವಿಜಯಲಕ್ಷ್ಮೀ ಗಾಯನ ಎಲ್ಲವೂ ಅತ್ಯಧ್ಬುತವಾಗಿ ಮೂಡಿ ಬಂದಿದೆ. ತಾಯಿ ಹೃದಯವನ್ನು ವರ್ಣಿಸುವ ಈ ಹಾಡಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿಸಿರುವ ಅಲ್ಲು ರಘು ಸುಪುತ್ರಿ ಆರು ತಿಂಗಳ ಮಗು ಯುಕ್ತ ನಟಿಸಿದ್ದು, ಮನಸಿ ಸುಧೀರ್ ಅವರ ಮನೋಜ್ಞ ಅಭಿನಯ ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

‘ಸೂಜಿದಾರ’, ‘ಸಲಗ’, ‘ಏಕ್ ಲವ್‌ ಯಾ’ ಮುಂತಾದ ಸಿನಿಮಾಗಳಲ್ಲಿ ನಟಿಸಿ ಗಮನಸೆಳೆದಿರುವ ಯಶ್ ಶೆಟ್ಟಿ ಹೀರೋ ಆಗಿ ಕಾಣಿಸಿಕೊಳ್ಳಲಿದ್ದು ನಾಯಕಿಯಾಗಿ ಅರ್ಚನಾ ಕೊಟ್ಟಿಗೆ ನಟಿಸುತ್ತಿದ್ದಾರೆ. ಉಳಿದಂತೆ ಅಶ್ವಿನ್ ರಾವ್ ಪಲ್ಲಕ್ಕಿ , ಸಂತೋಷ್ ಆಶ್ರಯ್ ನಟಿಸಿದ್ದಾರೆ. ಈ ಹಿಂದೆ ಹಲವು ಸಿನಿಮಾಗಳಿಗೆ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದ ಡಿಂಡಿಮ ಜುಗಲ್ ಬಂದಿ ಸಿನಿಮಾ ಮೂಲಕ ನಿರ್ದೇಶನಾಗಿ ಬಡ್ತಿ ಪಡೆದಿದ್ದಾರೆ.

ಉಳಿದಂತೆ ಕೋ ಡೈರೆಕ್ಟರ್ ಆಗಿ ಬಾಲಕೃಷ್ಣ ಯಾದವ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಸಂತೋಷ್, ಶ್ರೀನಿವಾಸ್,ಕೆಲಸ ನಿರ್ವಹಿಸಲಿದ್ದಾರೆ. ಡಿಂಡಿಮ ಕ್ರಿಯೇಷನ್ ನಡಿ ನಿರ್ಮಾಣವಾಗ್ತಿರುವ ಜುಗಲ್ ಬಂದಿ ಸಿನಿಮಾಗೆ ದಿವಾಕರ್ ಡಿಂಡಮ ನಿರ್ದೇಶನದ ಜೊತೆ ಬಂಡವಾಳ ಕೂಡ ಹಾಕಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

Please follow and like us:

Leave a Reply

Your email address will not be published. Required fields are marked *

Next Post

ನನ್ನ ಮಗ ಸ್ನೇಹಿತರಿಗೆ ಬ್ರೆಡ್, ಬಿಸ್ಕೆಟ್​ ತರಲು ಹೋಗಿದ್ದ, ಅವನ ಬಗ್ಗೆ ಏನೆನೋ ಮಾತಾಡ್ಬೇಡಿ...ಕಣ್ಣೀರಿಟ್ಟು ಮನವಿ ಮಾಡಿದ ನವೀನ್​​ ತಾಯಿ

Thu Mar 10 , 2022
ಉಕ್ರೇನ್​ನಲ್ಲಿ ಬಾಂಬ್​ ದಾಳಿಗೆ ಬಲಿಯಾದ ಮೆಡಿಕಲ್​ ವಿದ್ಯಾರ್ಥಿ ನವೀನ್​ ನಿವಾಸಕ್ಕೆ ಇಂದು ಆತನ ಸ್ನೇಹಿತರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಆತನ ಬಗ್ಗೆ ಟ್ರೋಲ್​ ಪೇಜ್​ನಲ್ಲಿ ನಡೆಯುತ್ತಿರುವ ಚರ್ಚೆಗೆ ಬೇಸರ ವ್ಯಕ್ತಪಡಿಸಿದರು. ನವೀನ್​ ತಾಯಿ ಸಹ ತಮ್ಮ ಮಗನ ಬಗ್ಗೆ ಇಲ್ಲ-ಸಲ್ಲದ ಮಾತುಗಳನ್ನಾಡಬೇಡಿ ಟ್ರೋಲಿಗರಿಗೆ ಕೈಮುಗಿದು ಮನವಿ ಮಾಡಿದರು. ಹಾವೇರಿ: ಇಂದು ಮೃತ ನವೀನ್ ನಿವಾಸಕ್ಕೆ ಉಕ್ರೇನ್​ನಿಂದ ಹಿಂದಿರುಗಿದ ಆತನ ಸ್ನೇಹಿತರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. […]

Advertisement

Wordpress Social Share Plugin powered by Ultimatelysocial