ನವದೆಹಲಿ: ಜಾರಿ ನಿರ್ದೇಶನಾಲಯ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ವಿರುದ್ಧ ಗಂಭೀರ ಆರೋಪ ಮಾಡಿದೆ.ತೆಲಂಗಾಣ ವಿಧಾನ ಪರಿಷತ್ ಸದಸ್ಯೆಯಾಗಿರುವ ಕವಿತಾ ಮತ್ತು ಅವರ ಪಾಲುದಾರ ಒಟ್ಟಾಗಿ ಲಿಕ್ಕರ್ ಕಂಪೆನಿ ಇಂಡೊ ಸ್ಪಿರಿಟ್ ನಲ್ಲಿ ಶೇಕಡಾ 65ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತನ್ನ ವರದಿಯಲ್ಲಿ ಹೇಳಿದೆ. ಕವಿತಾ ಅವರ ಹೆಸರು ಆರಂಭದಿಂದಲೂ ದೆಹಲಿ ಲಿಕ್ಕರ್ ಹಗರಣದಲ್ಲಿ ಕೇಳಿಬರುತ್ತಿದೆ. ಕಳೆದ ತಿಂಗಳು ಕೋರ್ಟ್ ಗೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಇಡಿ ಕವಿತಾ ಪ್ರತಿನಿಧಿಗಳ ಮೂಲಕ ಮದ್ಯದ ಕಂಪೆನಿಯಲ್ಲಿ ಪಾಲನ್ನು ಹೊಂದಿದ್ದು ಪ್ರತಿನಿಧಿಗಳನ್ನು ಗುರುತಿಸಿ ತನಿಖೆ ನಡೆಸಲಾಗಿದೆ ಎಂದು ಹೇಳಿದೆ. ಇಡಿ ವಿಶೇಷ ಕೋರ್ಟ್ ನಲ್ಲಿ ನ್ಯಾಯಾಧೀಶ ಎಂ ಕೆ ನಾಗ್ಪಾಲ್ ಮುಂದೆ ಆರೋಪಪಟ್ಟಿಯನ್ನು ಸಲ್ಲಿಸಿದ್ದು ಪ್ರಕರಣದ ಗಂಭೀರತೆ ಮತ್ತು ತೀವ್ರತೆಯನ್ನು ಪರಿಗಣಿಸಿರುವ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಿದೆ.ಹಗರಣ ಬೆಳಕಿಗೆ ಬಂದಿದ್ದು ಹೇಗೆ?: ದೆಹಲಿ ಲಿಕ್ಕರ್ ಹಗರಣ ಬೆಳಕಿಗೆ ಬಂದ ರೀತಿಯನ್ನು ಜಾರಿ ನಿರ್ದೇಶನಾಲಯ ವಿವರವಾಗಿ ತಿಳಿಸಿದೆ. “ಈ ಹಗರಣ ಮತ್ತು ಪಿತೂರಿಯ ನಿರ್ಣಾಯಕ ಪುರಾವೆಗಳೆಂದರೆ ಇಂಡಿಯಾ ಸ್ಪಿರಿಟ್ಸ್ ಪಾಲುದಾರಿಕೆಯು ರೂಪುಗೊಂಡ ಸಂದರ್ಭಗಳು. ನವೆಂಬರ್ 12 ರ ತನ್ನ ಹೇಳಿಕೆಯಲ್ಲಿ ಸಮೀರ್ (ಮಹೇಂದ್ರು) ಬಹಿರಂಗಪಡಿಸಿದಂತೆ, ವಿಜಯ್ ನಾಯರ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸ್ನೇಹಿತರ ಗುಂಪಿನ ಭಾಗವಾಗಿ ಅರುಣ್ ಪಿಳ್ಳೈಗೆ ಪರಿಚಯಿಸಿದರು, ಅವರು ಸಮೀರ್ ಅವರ ದೆಹಲಿ ವ್ಯವಹಾರದಲ್ಲಿ ಪಾಲನ್ನು ಕೇಳಿದರು. ಸಮೀರ್ ಈ ಪಾಲುದಾರಿಕೆಯ ಷರತ್ತನ್ನು ಒಪ್ಪಲಿಲ್ಲ.
ಇಂಡೋ ಸ್ಪಿರಿಟ್ಸ್ ನಲ್ಲಿ ಕೆಸಿಆರ್ ಪುತ್ರಿ ಕವಿತಾ ಪಾಲು ಎಂಬ ಸ್ಫೋಟಕ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
Please follow and like us: