• ಬಹಿರಂಗಪಡಿಸಿದ ಆರ್.ಧ್ರುವನಾರಾಯಣ್
• ಕೆಲ ದಿನಗಳಲ್ಲೇ ಅಧಿಕೃತ ಘೋಷಣೆ
ಜೆಡಿಎಸ್ನಿಂದ ಹಲವು ತಿಂಗಳಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ವಿಷಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಅವರೇ ಬಹಿರಂಗಪಡಿಸಿದ್ದಾರೆ. ಆದರೆ ಇನ್ನು ಅಧಿಕೃತ ಘೋಷಣೆಯೊಂದೆ ಬಾಕಿ ಉಳಿದಿದೆ.
ಜ.೨೧ ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಮುಖಂಡರ ದಂಡೇ ಜಿಲ್ಲೆಗೆ ಹರಿದು ಬರಲಿದೆ. ಈ ವೇಳೆ ಕಾಂಗ್ರೆಸ್ ಬಲ ಪ್ರದರ್ಶನ ನಡೆಯಲಿ. ಇದೇ ವೇಳೆ ಸಿದ್ದರಾಮಯ್ಯ ಅವರು ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ತಿಳಿಸಲಿದ್ದಾರೆ ಎನ್ನಲಾಗದೆ.
ಮತ್ತೊಬ್ಬ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ, ಮಾಜಿ ಸಚಿವ ಎ.ಮಂಜು ಅವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಖಚಿತತೆ ಸಿಗುತ್ತಿಲ್ಲ.
—
ರಾಜ್ಯದ ಹಲವು ಭಾಗಗಳಿಂದ ಪ್ರಮುಖರು ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ. ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ, ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಧ್ರುವನಾರಾಯಣ್ ತಿಳಿಸಿದ್ದಾರೆ.
—
ಜ.೨೧ ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಜಿಲ್ಲಾ ಉಸ್ತುವಾರಿಗಳು ಸೇರಿಗೆ ಪ್ರಮುಖ ನಾಯಕರು ಜಿಲ್ಲೆಗೆ ಆಗಲಿಸಲಿದ್ದಾರೆ. ಈ ಸಮಯದಲ್ಲಿ ಯರ್ಯಾರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬುದು ಸ್ಪಷ್ಟವಾಗಲಿದೆ. ಕೆ.ಎಂ.ಶಿವಲಿಂಗೇಗೌಡರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ. ಅರಕಲಗೂಡು ಕ್ಷೇತ್ರದ ಬಗ್ಗೆ ಇನ್ನೂ ಯಾವುದು ಸ್ಪಷ್ಟವಾಗಿಲ್ಲ.
ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇ.ಹೆಚ್.ಲಕ್ಷಣ್ ಅವರು ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada