ಅಣ್ಣಿಗೇರಿ: ಕಡಲೆ ಖರೀದಿ ಕೇಂದ್ರ ಆರಂಭಿಸಲು ಆಗ್ರಹ

 

 

ಅಣ್ಣಿಗೇರಿ: ಬೆಂಬಲ ಬೆಲೆ ಯೋಜನೆಯಡಿ ಕಡಲೆಬೀಜ ಖರೀದಿ ಕೇಂದ್ರವನ್ನು ಪಟ್ಟಣದಲ್ಲಿ ಪ್ರಾರಂಭಿಸಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ಬಗ್ಗೆ ತಹಶೀಲ್ದಾರ್ ಮಂಜುನಾಥ ಅಮಾಸಿ ಅವರ ಮೂಲಕ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಿದರು.ಕಡಲೆ ಬೀಜ ಪೂರ್ಣ ಪ್ರಮಾಣದಲ್ಲಿ ಬರುವ ಮುನ್ನ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರವನ್ನು ಆರಂಭಿಸಬೇಕು. ಸದ್ಯ ಖರೀದಿ ಕೇಂದ್ರ ಇಲ್ಲದ ಕಾರಣ ದಲ್ಲಾಳಿಗಳ ಮೂಲಕ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದು, ನಷ್ಟವಾಗುತ್ತಿದೆ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ಒತ್ತಾಯಿಸಿದರು.

ಒಂದು ವಾರದೊಳಗೆ ಖರೀದಿ ಕೇಂದ್ರ ಆರಂಭಿಸದಿದ್ದರೆ ಫೆ.14 ರಿಂದ ಸ್ಥಳೀಯ ಬಸ್ ನಿಲ್ದಾಣದ ಹತ್ತಿರ ಆಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದರು.
ರೈತ ಮುಖಂಡರಾದ ನಿಂಗಪ್ಪ ಬಡ್ಡೆಪ್ಪನವರ, ಬಸವರಾಜ ಹಾದಿಮನಿ, ಮಂಜುನಾಥ ಮಣ್ಣನ್ನವರ, ನಾರಾಯಣ ಮಾಡಳ್ಳಿ, ಲಕ್ಷ್ಮಣ ಮುದಕನಾಯ್ಕರ, ಮೆಹಬೂಬಸುಬಾನಿ ಖುದ್ದಣ್ಣವರ, ಇಮಾಮಸಾಬ ದಂಡಿನ ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಗಸೆ ಬೀಜದಲ್ಲಿ ಹೇರಳವಾಗಿ ನಾರಿನಾಂಶವಿದೆ!

Wed Feb 9 , 2022
  ಅಗಸೆ ಬೀಜದಲ್ಲಿ ಹೇರಳವಾಗಿ ನಾರಿನಾಂಶವಿದೆ. ಇದು ನಿಮ್ಮ ಜೀರ್ಣಕ್ರೀಯೆಯನ್ನು ಸರಾಗವಾಗಿಸುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ. ಹಾಗೇ ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜತೆಗೆ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.ಇದರ ಜತೆಗೆ ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಲು ಕೂಡ ಸಹಾಯಕವಾಗುತ್ತದೆ.ಇದರಲ್ಲಿ ಓಮೆಗಾ 3 ಪ್ಯಾಟಿ ಆಸಿಡಿ ಹೆಚ್ಚಿದೆ. ಇದನ್ನು ಒಂದು ಚಮಚ ಹಾಗೇ ತಿನ್ನುವುದರಿಂದ ಅಥವಾ ಬೆಳಿಗ್ಗೆ ಖಾಲಿ ಹೊಟ್ಟೆಗೆ ಒಂದು ಗ್ಲಾಸ್ ಬಿಸಿನೀರಿಗೆ 1 ಚಮಚ ಇದರ ಪುಡಿಯನ್ನು ಮಿಕ್ಸ್ […]

Advertisement

Wordpress Social Share Plugin powered by Ultimatelysocial