ಎರಡೇ ದಿನದಲ್ಲಿ ನೌಕರಿ ನೀಡಿ ಮಾನವೀಯತೆ ಮೆರೆದ ಕಲಬುರಗಿ ಡಿಸಿ ಯಶವಂತ ವಿ.ಗುರುಕರ್

 

ಕಲಬುರಗಿ, ಜ.28: ತನ್ನ ಗಂಡ ಮೃತರಾದ ಹಿನ್ನೆಲೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿ ಪಡೆಯಲು ಅರ್ಜಿ ಸಲ್ಲಿಸಿದ್ದ ಮಹಿಳೆಗೆ ಕೇವಲ ಎರಡೇ ದಿನದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಉದ್ಯೋಗ ನೀಡಿ, ಸಂತ್ರಸ್ತ ಕುಟುಂಬಕ್ಕೆ ನೆರವಾಗಿದ್ದಾರೆ.ಕಲಬುರಗಿ ತಾಲೂಕಿನ ಕುಸನೂರಿನ ಶಿವಲಿಂಗಮ್ಮ ನೌಕರಿ ಪಡೆದವರು.ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡ ಯಶವಂತ ವಿ.ಗುರುಕರ್, ಜ.25ರಂದು ತಮ್ಮ ಕಚೇರಿ ಮುಂದೆ ಇಬ್ಬರು ಮಕ್ಕಳೊಂದಿಗೆ ಮಹಿಳೆಯೊಬ್ಬರು ಕಾದು ಕುಳಿತಿರುವುದನ್ನು ಕಂಡು ಅವರ ಬಳಿ ತೆರಳಿದರು.ಏನು ನಿಮ್ಮ ಸಮಸ್ಯೆ ಎಂದು ಕೇಳಿದಾಗ, ತನ್ನ ಗಂಡ ಆಳಂದ ತಾಲೂಕಿನ ಖಜೂರಿ ನಾಡಾ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದು, ಕರ್ತವ್ಯದಲ್ಲಿದ್ದಾಗ 2021ರ ಮಾ.16ರಂದು ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದು, ಅನುಕಂಪ ಆಧಾರದ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ ಎಂದರು.ಕೂಡಲೇ ಜಿಲ್ಲಾಧಿಕಾರಿ, ಈ ಮಹಿಳೆಗೆ 2 ದಿನದಲ್ಲಿ ನೌಕರಿ ಆದೇಶ ನೀಡಲು ಕ್ರಮವಹಿಸಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸುವುದಾಗಿ ಸ್ಥಳದಲ್ಲಿದ್ದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಇದೀಗ ಇಂದು ಮಹಿಳೆ ಕೋರಿದ ಸ್ಥಳವಾದ ಕಲಬುರಗಿ ತಹಶೀಲ್ದಾರ ಕಚೇರಿಯ ಖಾಲಿಯಿದ್ದ ದ್ವಿತೀಯ ದರ್ಜೆ ಸಹಾಯಕರ ಹುದ್ದೆ ನೇಮಕಾತಿಯ ಆದೇಶ ನೀಡಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಮಾನವೀಯತೆ ಮೆರೆದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪುನೀತ್ ರಾಜ್ ಕುಮಾರ್ ಮತ್ತು ಅಜಿತ್ ಅವರ AK61 ಬಿಡುಗಡೆ ದಿನಾಂಕ ;

Sat Jan 29 , 2022
ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಚಲನಚಿತ್ರ ಬಿಡುಗಡೆ ದಿನಾಂಕ ಮತ್ತು ಅಜಿತ್‌ನ AK61 ಬಿಡುಗಡೆ ದಿನಾಂಕದಿಂದ ಮಹೇಶ್ ಬಾಬು ಅಭಿಮಾನಿಗಳಿಗೆ ಸರ್ಕಾರ ವಾರಿ ಪಟದ ವ್ಯಾಲೆಂಟೈನ್ಸ್ ಡೇ ಟ್ರೀಟ್‌ನವರೆಗೆ, ನಾಗಾರ್ಜುನ ಮಾಧ್ಯಮದ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು S.S. ರಾಜಮೌಳಿ RRR ಎಷ್ಟು ಐತಿಹಾಸಿಕ ಸತ್ಯ ಮತ್ತು ಕಾಲ್ಪನಿಕವಾಗಿದೆ ಎಂಬುದನ್ನು ಬಹಿರಂಗಪಡಿಸುತ್ತಾರೆ; ಕಳೆದ ಒಂದು ವಾರದಿಂದ ದಕ್ಷಿಣದ ಚಲನಚಿತ್ರೋದ್ಯಮದಲ್ಲಿ ಇಂದು ಕಡಿಮೆಯಾದ ಎಲ್ಲವನ್ನೂ ಹಿಂತಿರುಗಿ ನೋಡುವ ಸಮಯ ಇದು. ಟ್ರೆಂಡಿಂಗ್ […]

Advertisement

Wordpress Social Share Plugin powered by Ultimatelysocial