ಕಲಬುರ್ಗಿ: ದೊಡ್ಡ ದೊಡ್ಡ ಭಾಷಣ ಮಾಡುವ ನಾಯಕರು ಒಮ್ಮೆ ಈ ಶಾಲೆಗೆ ಭೇಟಿ ಕೊಡಬೇಕು

ಭವ್ಯ ಭಾರತದ ಭವಿಷ್ಯ ಮಕ್ಕಳು ಅಂತ ದೊಡ್ಡ ದೊಡ್ಡ ಭಾಷಣ ಮಾಡುವ ನಾಯಕರು ಒಮ್ಮೆ ಈ ಶಾಲೆಗೆ ಭೇಟಿ ಕೊಡಬೇಕು ಆಗ ತಿಳಿಯುತ್ತೆ ಸರ್ಕಾರಿ ಶಾಲೆಗಳ ದುಸ್ಥಿತಿ.

ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ 10 ಕೋಣೆಗಳಿವೆ 8 ಕೋಣೆಗಳು ಸೋರುತ್ತಿವೆ ಸತತವಾಗಿ 5-6 ದಿನಗಳಿಂದ ಸುರಿಯುತ್ತಿರುವ ಮಳೆಗೆ ಶಾಲೆ ಕೋಣೆಗಳು ಸೋರುತ್ತಿವೆ.

ಹಲವಾರು ಬಾರಿ ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದರು ಯಾವುದೇ ಪ್ರಯೋಜನ ಆಗಿಲ್ಲಾ ಎಂದು ಶಾಲೆ ಶಿಕ್ಷಕರು ತಿಳಿಸಿದರು.

ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದ ಮಕ್ಕಳು ಮತ್ತು ಸಿಬ್ಬಂದಿಗಳು ಜೀವ ಕೈಯಲ್ಲಿ ಹಿಡಿದುಕೊಂಡು ತರಗತಿಗಳು ನಡೆಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಮುಂದೆ ಏನಾದ್ರೂ ಅನಾಹುತ ಸಂಭವಿಸುವ ಮುಂಚೆ ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಕ್ಷೇತ್ರದ ಶಾಸಕರಾದ ಡಾ. ಅಜಯಸಿಂಗ್ ರವರು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿ: ಅಪಘಾತದಲ್ಲಿ ವ್ಯಕ್ತಿ ಸಾವು ಕೋರ್ಟ್ ಆದೇಶದ ಮೇರೆಗೆ ಬಸ್ ಜಪ್ತಿ

Fri Jul 15 , 2022
ಹುಬ್ಬಳ್ಳಿ: ಸಾರಿಗೆ ಸಂಸ್ಥೆ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕನೋರ್ವ ಅಪಘಾತದಲ್ಲಿ ಮೃತಪಟ್ಟರೂ ನೀಡಬೇಕಾದ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ವಾರೆಂಟ್ ಅನ್ವಯ ಕೋರ್ಟ ಸಿಬ್ಬಂದಿ ಐರಾವತ ಬಸ್ಸೊಂದನ್ನು ಜಪ್ತಿ ಮಾಡಿ ಹುಬ್ಬಳ್ಳಿ ಕೋರ್ಟ ಎದುರು ತಂದು ನಿಲ್ಲಿಸಿದ್ದಾರೆ.2019ರಲ್ಲಿ ಸಂಭವಿಸಿದ ನವಲಗುಂದ ಹುಬ್ಬಳ್ಳಿ ಸಂಭವಿಸಿದ ಅಪಘಾತದಲ್ಲಿ ದೇವಪ್ಪ ಕುಲಕರ್ಣಿ ಎಂಬವರು ಮೃತಪಟ್ಟಿದ್ದರು. ಮೃತ ಚಾಲಕನ ತಾಯಿ ಶ್ರೀಮತಿ ಶಾಂತವ್ವ ಕರವೀರಪ್ಪ ಕುಲಕರ್ಣಿ ಇವರು ನಗರದ ಎರಡನೇ ಹಿರಿಯ ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯಾಲಯ […]

Advertisement

Wordpress Social Share Plugin powered by Ultimatelysocial