ಕಾಳಿಮಾತೆ ಕೈಯಲ್ಲಿ ಸಿಗರೇಟ್ ಕೊಟ್ಟ ಪೋಸ್ಟರ್ ವಿವಾದಕ್ಕೆ ಸಂಬಂಧಿಸಿದಂತೆ ನಿರ್ದೇಶಕಿ ಲೀನಾ ಮಣಿಮೇಗಲೈ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಿರುವಂತೆ ಸುಪ್ರೀಂ ಕೋರ್ಟ್ ನಿರ್ದೇಶಕಿ ಪರ ಹೇಳಿಕೆ ನೀಡಿದೆ.
ಲೀನಾ ನಿರ್ದೇಶನದಲ್ಲಿ ಮೂಡಿ ಬಂದ ಕಾಳಿ ಸಾಕ್ಷ್ಯ ಚಿತ್ರದ ಪೋಸ್ಟರ್ ನಲ್ಲಿ ಎಲ್.ಜಿ.ಬಿ.ಟಿ.ಕ್ಯೂ ಧ್ವಜ ಹಿಡಿದು ಸಿಗರೇಟು ಸೇದುತ್ತಿರುವಂತೆ ಚಿತ್ರಿಸಲಾಗಿತ್ತು.
ತಮ್ಮ ಸಿನಿಮಾದ ಪೋಸ್ಟರ್ ನಲ್ಲಿ ಕಾಳಿ ಮಾತೆಯ ಕೈಗೆ ಸಿಗರೇಟು ಕೊಟ್ಟಿರುವ ವಿಚಾರಕ್ಕಾಗಿ ಭಾರೀ ವಿವಾದ ಎಬ್ಬಿಸಿದ್ದ ನಿರ್ದೇಶಕಿ ಲೀನಾ ಮಣಿಮೇಕಲೈ ತಮ್ಮ ಮೇಲಿನ ದೂರುಗಳನ್ನು ವಜಾ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು. ರಾಜ್ಯದ ನಾನಾ ಭಾಗಗಳಲ್ಲಿ ದಾಖಲಾದ ಎಫ್.ಐ.ಆರ್ ಗಳನ್ನು ರದ್ದು ಮಾಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು. ಈ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ಬಲವಂತವಾಗಿ ಏನೂ ಕ್ರಮ ಕೈಗೊಳ್ಳದಂತೆ ತಿಳಿಸಿದೆ.
ತಮ್ಮ ಸಿನಿಮಾದ ಪೋಸ್ಟರ್ ನಲ್ಲಿ ಲೀನಾ ಕಾಳಿ ಮಾತೆಯ ಕೈಗೆ ಸಿಗರೇಟು ಕೊಟ್ಟಿದ್ದಲ್ಲದೇ, ತೃತೀಯ ಲಿಂಗಿಗಳನ್ನು ಸೂಚಿಸುವಂತಹ ಬಾವುಟವನ್ನೂ ಅವರು ಕಾಳಿ ಮಾತೆಯ ಮತ್ತೊಂದು ಕೈಗೆ ಕೊಟ್ಟಿದ್ದರು. ಈ ಪೋಸ್ಟ್ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ನಿರ್ದೇಶಕಿಯನ್ನು ಬಂಧಿಸಿ, ಕ್ರಮ ತಗೆದುಕೊಳ್ಳಬೇಕು ಎಂದು ದೇಶದ ನಾನಾ ರಾಜ್ಯಗಳಲ್ಲಿ ಹಲವರು ದೂರು ದಾಖಲಿಸಿದ್ದರು.
ತಾವು ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗೆ ಧಕ್ಕೆ ಆಗುವಂತೆ ಪೋಸ್ಟರ್ ರಚಿಸಿಲ್ಲ, ಆ ಪೋಸ್ಟರ್ ಯಾರಿಗೂ ನೋವು ತರುವಂತಹ ಉದ್ದೇಶ ಹೊಂದಿರಲಿಲ್ಲ ಎಂದು ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಮನದಟ್ಟು ಮಾಡುತ್ತಿರುವ ಅವರು, ತಮ್ಮ ಕುಟುಂಬಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆಯೊಡ್ಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ತಗೆದುಕೊಳ್ಳಬೇಕು ಎಂದು ಅರ್ಜಿಯಲ್ಲಿ ಅವರು ಮನವಿ ಮಾಡಿದ್ದರು.
https://play.google.com/store/apps/details?id=com.speed.newskannad