ಬೆಂಗಳೂರು: ಈಗಾಗಲೇ ರಾಜ್ಯಾಧ್ಯಂತ ತಾರಕಕ್ಕೇರಿರುವಂತ ಹಿಜಾಬ್ ವಿರೋಧಿಸಿ , ಕೇಸರಿ ಶಾಲು ವಿವಾದ, ಬೆಂಗಳೂರಿಗೆ ವ್ಯಾಪಿಸೋ ಮುನ್ನಲೇ, ಸರ್ಕಾರ ಎಚ್ಚೆತ್ತುಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಶಾಲಾ-ಕಾಲೇಜುಗಳ ಸುತ್ತಾ-ಮುತ್ತಾ 144 ಸೆಕ್ಷನ್ ಅಡಿಯಲ್ಲಿ ) ನಿಷೇಧಾಜ್ಞೆ ಜಾರಿಗೊಳಿಸಿ, ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.ಈ ಕುರಿತಂತೆ ಆದೇಶ ಹೊರಡಿಸಿರುವಂತ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್ ಅವರು, ಇಂದಿನಿಂದ ಫೆಬ್ರವರಿ 22, 2022ರವರೆಗೆ ಶಾಲಾ-ಕಾಲೇಜುಗಳ ಸುತ್ತಾಮುತ್ತಾ ಪ್ರತಿಭಟನೆ , ಧರಣಿ ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.ಬೆಂಗಳೂರಿನ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರದ ಕುರಿತಂತೆ ಯಾವುದೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವಂತಿಲ್ಲ. ಹೆಚ್ಚು ವಿದ್ಯಾರ್ಥಿಗಳ ಗುಂಪು ಸೇರುವಂತಿಲ್ಲ. ಶಾಲೆ, ಪಿಯು ಕಾಲೇಜು, ಡಿಗ್ರಿ ಕಾಲೇಜು, ಇತರೆ ಶಿಕ್ಷಣ ಸಂಸ್ಥೆಗಳ ಬಳಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ನಿಯಮ ಮೀರಿದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada