ಹಿಜಾಬ್ ವಿವಾದದಿಂದ ಮುಗ್ಧ ವಿದ್ಯಾರ್ಥಿಗಳ ಮಧ್ಯೆ ವಿಷದ ಗೋಡೆ ನಿರ್ಮಾಣ ನಟ ಕಮಲ್ ಹಾಸನ್ ಅವರು ಬುಧವಾರ ಹೇಳಿದ್ದಾರೆ.

ನವದೆಹಲಿ: ಹಿಜಾಬ್ ವಿವಾದದಿಂದ ಮುಗ್ಧ ವಿದ್ಯಾರ್ಥಿಗಳ ಮಧ್ಯೆ ವಿಷದ ಗೋಡೆ ನಿರ್ಮಾಣ ಮಾಡಲಾಗುತ್ತಿದೆ ಎಂದು ನಟ ಹಾಗೂ ಮಕ್ಕಳ ನಿಧಿ ಮಯಂ (ಎಂಎನ್‌ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು ಬುಧವಾರ ಹೇಳಿದ್ದಾರೆ.ಹಿಜಾಬ್ ವಿವಾದ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಹಿಜಾಬ್ ವಿವಾದ ಅಶಾಂತಿ ಹುಟ್ಟುಹಾಕುತ್ತಿದೆ.ವಿದ್ಯಾರ್ಥಿಗಳ ಮಧ್ಯೆ ಧಾರ್ಮಿಕ ವಿಷದ ಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಕರ್ನಾಟಕದ ವಿವಾದ ತಮಿಳುನಾಡಿಗೆ ಬರುವುದು ಬೇಡ. ಪ್ರಗತಿಪರ ಶಕ್ತಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ಶಾಲು ಸಂಘರ್ಷ ಹಿಂಸಾಚಾರಕ್ಕೆ ತಿರುಗಿದ್ದು, ಮಂಗಳವಾರ ರಾಜ್ಯದ 18 ಜಿಲ್ಲೆಗಳ 54ಕ್ಕೂ ಹೆಚ್ಚು ಕಾಲೇಜುಗಳಲ್ಲಿ ವಿವಾದ ಭುಗಿಲೆದ್ದಿದ್ದು. ಈ ಪೈಕಿ 4 ಜಿಲ್ಲೆಗಳ 6 ಕಾಲೇಜುಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ವಿದ್ಯಾರ್ಥಿಗಳ ಗುಂಪು ಘರ್ಷಣೆ, ಕಲ್ಲು ತೂರಾಟ ನಡೆಸಿದ್ದರು.ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಕಾಲೇಜಿನೊಳಗೆ ಪ್ರವೇಶಿಸಿ ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗಿಸಿದ್ದರು. ಹಿಂಸಾಚಾರದ ವೇಳೆ 12ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಬಸ್ ಗಳು ಸೇರಿದಂತೆ 11 ವಾಹನಗಳು ಕಲ್ಲು ತೂರಾಟದಿಂದ ಜಖಂಗೊಂಡಿವೆ ಎಂದು ವರದಿಗಳಿಂದ ತಿಳಿದುಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪವರ್‌ ಸ್ಟಾರ್‌ ಪವನ್‌ ಕಲ್ಯಾಣ್ ಗೆ RGV ಪಂಚ್‌..!|Pavan Kalyan | Speed News Kannada|

Wed Feb 9 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://plಇay.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial