ಕರ್ನಾಟಕದ ಹಿಜಾಬ್ ಪ್ರಕರಣ ಈಗ ವಿಶ್ವವ್ಯಾಪಿ ಚರ್ಚೆಯ ವಿಷಯವಾಗಿದೆ. ಶಿಕ್ಷಣ ಸಂಸ್ಥೆ ಒಳಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಹೋರಾಟ ಮುಂದುವರೆದಿದೆ. ಇನ್ನೊಂದು ಕಡೆ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎನ್ನುವ ಕೂಗು ಕೂಡ ಕೇಳಿಬರುತ್ತಿದೆ. ಈ ಬೆನ್ನಲ್ಲೇ ಹಿಜಾಬ್ ಬಗ್ಗೆ ಸಿನಿಮಾ ತಾರೆಯರು ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.ಅದರಲ್ಲೂ ಕಾಂಟ್ರವರ್ಸಿ ಕ್ವೀನ್ ಕಂಗನಾ ರನೌತ್ ಹಿಜಾಬ್ ಬಹಿರಂಗವಾಗಿ ಹೇಳಿಕೆ ನೀಡಿದೆ ಹೋದರೂ, ತನ್ನ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ತನ್ನ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.ಕಂಗನಾ ರನೌತ್ಗೆ ವಿವಾದಗಳು ಹೊಸತೇನಲ್ಲ. ಹಾಗಂತ ವಿವಾದಗಳಿಗೆ ಪ್ರತಿಕ್ರಿಯೆ ನೀಡುವುದನ್ನೂ ನಿಲ್ಲಿಸಿಲ್ಲ. ಹೊತ್ತಿ ಉರಿಯುತ್ತಿರುವ ಹಿಜಾಬ್ ಪ್ರಕರಣಕ್ಕೆ ನಿರೀಕ್ಷೆಯಂತೆ ಕಂಗನಾ ರನೌತ್ ಪ್ರತಿಕ್ರಿಯೆ ನೀಡಿದ್ದಾರೆ. ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಕಂಗನಾ ಹಂಚಿಕೊಂಡಿರುವ ಅಭಿಪ್ರಾಯ ಸಿಕ್ಕಾ ಪಟ್ಟೆ ವೈರಲ್ ಆಗುತ್ತಿದೆ.ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಗನಾ ರನೌತ್ ನೀಡಿದ ಪ್ರತಿಕ್ರಿಯೆ ವೈರಲ್ ಆಗುತ್ತಿದೆ. ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಕಂಗನಾ ತಮ್ಮ ಅಭಿಪ್ರಾಯವನ್ನು ಶೇರ್ ಮಾಡಿದ್ದಾರೆ. “ನಿಮಗೆ ಧೈರ್ಯ ತೋರಿಸಬೇಕು ಎನ್ನುವುದಾದರೆ, ಅಫ್ಘಾನಿಸ್ತಾನದಲ್ಲಿ ಬುರ್ಖಾ ಧರಿಸದೇ ಧೈರ್ಯ ಪ್ರದರ್ಶಿಸಿ” ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ‘ನೀವು ಸ್ವತಂತ್ರರಾಗುವತ್ತ ಯೋಚಿಸಿ, ನಿಮ್ಮನ್ನು ನೀವು ಬಂಧಿಸಿಕೊಳ್ಳಲು ಯತ್ನಿಸಬೇಡಿ’ ಎಂದು ಕಂಗನಾ ಸಲಹೆ ಕೂಡ ನೀಡಿದ್ದಾರೆ.ಕಂಗನಾ ರನೌತ್ ತನ್ನ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಲೇಖಕ ಆನಂದ್ ರಂಗನಾಥನ್ ಅವರ ಟ್ವಿಟರ್ ಪೋಸ್ಟ್ ಅನ್ನು ಶೇರ್ ಮಾಡಿಕೊಂಡಿದ್ದಾರೆ. ಹಿಜಾಬ್ ಪ್ರಕರಣದ ಬಗ್ಗೆ ಆನಂದ್ ರಂಗನಾಥ್ ನಿರಂತರವಾಗಿ ಟ್ವೀಟ್ ಮಾಡುತ್ತಿದ್ದಾರೆ. ಇತ್ತೀಚೆಗೆ ಮಾಡಿದ ಪೋಸ್ಟ್ ಒಂದರಲ್ಲಿ ಇರಾನ್ ಮಹಿಳೆಯರು ನಾಲ್ಕೈದು ದಶಕಗಳ ಹಿಂದೆ ಇರುವ ಹಾಗೂ ಈಗಿರುವ ಸ್ಥಿತಿಯ ಪೋಟೊಗಳನ್ನು ಶೇರ್ ಮಾಡಿಕೊಂಡಿದ್ದರು. ಲೇಖಕ ಆನಂದ್ ರಂಗನಾಥನ್ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಉಡುಪುಗಳನ್ನು ಧರಿಸುವುದಕ್ಕೆ ವಿರೋಧವಾಗಿದ್ದಾರೆ. ಈ ಪದ್ಧತಿಯನ್ನು ಕಠೋರ, ಸ್ತ್ರೀದ್ವೇಷ ಮತ್ತು ದಬ್ಬಾಳಿಕೆ ಎಂದು ಬಣ್ಣಿಸಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada